ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಜಾಮೀನೀನ ಅರ್ಜಿಯ ವಾದ ಪ್ರತಿವಾದ ಮುಗಿದಿದ್ದು, ಆದೇಶ ಕಾಯ್ದಿರಿಸಲಾಗಿದೆ.ಹೈಕೋರ್ಟ್‌ನ (Karnataka High Court) ಜನಪ್ರತಿನಿಧಿಗಳ ಪೀಠದಲ್ಲಿ ಎರಡು ಕೇಸ್ ಗಳಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಹಾಗೂ ಒಂದು ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿಗಾಗಿ ಪ್ರಜ್ವಲ್ ಅರ್ಜಿ ಸಲ್ಲಿಸಿದ್ದರು. ಪ್ರಜ್ವಲ್ ಪರ ಹಿರಿಯ ವಕೀಲ ಪ್ರಭುಲಿಂಗ ನಾವಡಗಿ ವಾದ ಮಂಡಿಸಿ, ಇದೊಂದು ರಾಜಕೀಯ ಷಡ್ಯಂತ್ರ್ಯವಾಗಿದ್ದು, 3-4 ವರ್ಷಗಳ ಹಿಂದೆ ಅತ್ಯಾಚಾರವಾಗಿದ್ದ ಬಗ್ಗೆ ಉಲ್ಲೇಖಿಸಿದ್ದಾರೆ. ಅತ್ಯಾಚಾರ ನಡೆದಿದೆ ಅನ್ನೋದಾದ್ರೆ ಆಗಲೇ ಯಾಕೆ ದೂರು ನೀಡಿರಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: J&K ಚುನಾವಣೆಯಲ್ಲಿ ಕಾಂಗ್ರೆಸ್‌-ಎನ್‌ಸಿ ಮೈತ್ರಿಕೂಟ ಗೆಲ್ಲುವ ಸಾಧ್ಯತೆ ಹೆಚ್ಚಿದೆ: ಪಾಕ್‌ ರಕ್ಷಣಾ ಸಚಿವಪ್ರಜ್ವಲ್‌ ವಿರುದ್ಧ ದೂರು ದಾಖಲಾಗಿರುವುದು ದುರುದ್ದೇಶಪೂರಕ. ತನಿಖೆಗೆ ಸ್ಪಂದಿಸಿ, ಕಳೆದ 4 ತಿಂಗಳಿಂದ ಜೈಲಲಿದ್ದಾರೆ. ಹೀಗಾಗಿ ಜಾಮೀನು ನೀಡುವಂತೆ ವಾದ ಮಂಡಿಸಿದ್ರು. ಇದಕ್ಕೆ ಪರತಿವಾದ ಸಲ್ಲಿಸಿದ್ದ ಎಸ್‌ಪಿಪಿ ಪ್ರೊ.ರವಿವರ್ಮಕುಮಾರ್, ಆರೋಪಿ ಸಾಕ್ಷಿನಾಶ ಪಡಿಸಿದ್ದು, ಈವರೆಗೂ ತನಿಖೆಗೆ ಮೊಬೈಲ್ ಕೊಟ್ಟಿಲ್ಲ. ಎಫ್‌ಐಆರ್‌ ದಾಖಲಾಗ್ತಿದ್ದಂತೆ ವಿದೇಶಕ್ಕೆ ಹಾರಿ ತಲೆ ಮರೆಸಿಕೊಂಡಿದ್ರು. ಪ್ರಭಾವಿಯಾಗಿದ್ದು ಜಾಮೀನಿನ ಮೇಲೆ ಹೊರ ಬಂದ್ರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರ್ತಾರೆ. ಹೀಗಾಗಿ ಜಾಮೀನು ನೀಡಬಾರದು ಅಂತ ಪ್ರತಿವಾದ ಮಂಡಿಸಿದ್ರು. ವಾದ-ಪ್ರತಿ ವಾದ ಆಲಿಸಿದ ಮಾನ್ಯ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಆದೇಶವನ್ನ ಕಾಯ್ದಿರಿಸಿದ್ದಾರೆ. ಇದನ್ನೂ ಓದಿ: ಹೊರಗೆ ಹೋದ್ಮೇಲೆ ರೇಣುಕಾಸ್ವಾಮಿ ಕುಟುಂಬಕ್ಕೆ ಸಹಾಯ ಮಾಡ್ತೀನಿ – ದರ್ಶನ್ ಪಶ್ಚಾತ್ತಾಪದ ಮಾತುರೇವಣ್ಣ ಜಾಮೀನು ಅರ್ಜಿ ವಿಚಾರಣೆ ಸೆ.26ಕ್ಕೆ ಮುಂದೂಡಿಕೆ: 
ಇನ್ನೂ ಕೆ.ಆರ್‌ ನಗರ ಸಂತ್ರಸ್ತೆ ಪ್ರಕರಣ ರದ್ದು ಕೋರಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಏಕಸದಸ್ಯ ಪೀಠವು ಸೆ.26ಕ್ಕೆ ಮುಂದೂಡಿದೆ. ಇದನ್ನೂ ಓದಿ: ದರ್ಶನ್ ಬಿಡುಗಡೆಗಾಗಿ ದೇವಿ ಮೊರೆ ಹೋದ ಫ್ಯಾನ್ಸ್‌- ಬೂದುಕುಂಬಳಕಾಯಿ ದೀಪ ಬೆಳಗಿಸಿ ವಿಶೇಷ ಪೂಜೆSign in to your account
Username or Email Address


Password

 Remember Me


