ಬೆಂಗಳೂರು: ಪ್ರತಿಯೊಬ್ಬರಿಗೂ ಮುಖ್ಯಮಂತ್ರಿ (Chief Minister) ಆಗಬೇಕು ಅಂತಾ ಆಸೆ ಇರುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ಹೇಳಿದ್ದಾರೆ.ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೊದಲು ಸಚಿವ, ಅಮೇಲೆ ಡಿಸಿಎಂ, ಬಳಿಕ ಸಿಎಂ, ಅನಂತರ ಕೇಂದ್ರ ಸಚಿವರಾಗಬೇಕು ಅಂತಾ ಆಸೆ ಇರುತ್ತದೆ. ಆದರೆ ಸದ್ಯಕ್ಕೆ ಸಿಎಂ ರೇಸ್ ಸನ್ನಿವೇಶ ಇಲ್ಲ. ಮುಡಾ (MUDA) ತನಿಖೆ ಆಗಬೇಕು, ಈಗ ರಾಜೀನಾಮೆ ಪ್ರಶ್ನೆ ಇಲ್ಲ ಎಂದರು. ಪಾರ್ಟಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಯಾರೊಬ್ಬರ ವೈಯುಕ್ತಿಕ ತೀರ್ಮಾನ ಅಲ್ಲ. ಯಾರೂ ಕಿಂಗ್ ಮೇಕರ್ ಆಗಲು ಕಾಂಗ್ರೆಸ್ ನಲ್ಲಿ ಸಾಧ್ಯವಿಲ್ಲ. ಸಿದ್ದರಾಮಯ್ಯ (Siddaramaiah) ಮುಂದೆಯೂ ಸಿಎಂ ಆಗಿಯೇ ಇರುತ್ತಾರೆ. ಪಕ್ಷದಲ್ಲಿ ಯಾವ ಮುಸುಕಿನ ಗುದ್ದಾಟವೂ ಇಲ್ಲ.  ಸರ್ಕಾರ ಆರಂಭಗೊಂಡ ದಿನದಿಂದ ಬಿಜೆಪಿಯವರು ಸರ್ಕಾರ ಬೀಳುತ್ತದೆ ಎನ್ನುತ್ತಿದ್ದಾರೆ. ಇದೆಲ್ಲ ರಾಜಕೀಯದಲ್ಲಿ ಸ್ವಾಭಾವಿಕ ಎಂದು ಹೇಳಿದರು. ಇದನ್ನೂ ಓದಿ: ಉದ್ಯೋಗಕ್ಕಾಗಿ ಭೂಮಿ ಪ್ರಕರಣ – ಮಾಜಿ ಸಿಎಂ ಲಾಲು ಪ್ರಸಾದ್, ಇಬ್ಬರು ಪುತ್ರರಿಗೆ ಜಾಮೀನುರಹಸ್ಯ ಸಭೆಗಳ ಬಗ್ಗೆ ಹೈಕಮಾಂಡ್‌ಗೆ ವರದಿ ರವಾನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದ ಪರವಾಗಿ ನಾವು ನಿಂತಿದ್ದೇವೆ. ಪಕ್ಷಕ್ಕೆ ಪ್ರತಿ ದಿನ 12 ಗಂಟೆ ಸಮಯ ನೀಡುತ್ತಿದ್ದೇವೆ. ಕೆಲವರು ತೆರೆಮರೆಯಲ್ಲಿ ಪಕ್ಷಕ್ಕೆ ದುಡಿಯುತ್ತಿರುತ್ತಾರೆ. ಕೆಲವರು ಹೈಲೈಟ್ ಆಗುತ್ತಾರೆ, ಕೆಲವರು ಹೈಲೈಟ್ ಆಗೋದಿಲ್ಲ. ವಿಮಾನನಿಲ್ದಾಣ ರಸ್ತೆಯಲ್ಲಿ ಪೋಸ್ಟರ್‌ ಬ್ಯಾನರ್‌ ಹಾಕಿಕೊಳ್ಳುವವರು ಹೈಲೈಟ್‌ ಆಗುತ್ತಾರೆ. ಹಳ್ಳಿಯಲ್ಲಿ ಸ್ವಂತ ದುಡ್ಡಿನಿಂದ ಪಕ್ಷ ಕಟ್ಟುವವರು ಗೊತ್ತೇ ಆಗುವುದಿಲ್ಲ. ನಾವೆಲ್ಲ ಸಭೆ ಸೇರಿದ ಕಾರಣಕ್ಕೆ ಹೆದರಬೇಕಾಗಿಲ್ಲ. ಎಲ್ಲವನ್ನೂ ಹೈಕಮಾಂಡ್ ಗಮನಿಸುತ್ತದೆ ಎಂದು ಹೇಳಿದರು.Sign in to your account
Username or Email Address


Password

 Remember Me


