ರಾಯಚೂರು: ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ಮಂತ್ರಾಲಯ ಮಠಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ.ಉಪ ಮಖ್ಯಮಂತ್ರಿ ಸ್ಥಾನದ ಆಕಾಂಕ್ಷೆಯಲ್ಲಿ ಇರುವ ಶ್ರೀರಾಮುಲು ರಾಯರಿಗೆ ವಿಶೇಷ ಪೂಜೆ ಸಲ್ಲಿಸಿದರು. ಗುರುವಾರ ಸೂರ್ಯಗ್ರಹಣ ಹಿನ್ನೆಲೆಯೂ ರಾಯರ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.ಮಂತ್ರಾಲಯ ಮಠದಲ್ಲಿ ಸಚಿವ ಶ್ರೀರಾಮುಲು ಅವರನ್ನು ವಾದ್ಯಗೋಷ್ಠಿ ಮೂಲಕ ಸ್ವಾಗತಿಸಲಾಯಿತು. ಬಳಿಕ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶಾಲು ಹೊದಿಸಿ ಆಶೀರ್ವದಿಸಿದರು. ಮಂತ್ರಾಕ್ಷತೆ ನೀಡಿ ಆಶೀರ್ವಚನ ನೀಡಿದರು.ಈ ವೇಳೆ ರಾಯಚೂರು ಜಿಲ್ಲಾ ಬಿಜೆಪಿ ಮುಖಂಡರು ಶ್ರೀರಾಮುಲು ಜೊತೆಗಿದ್ದರು. ಮಂತ್ರಾಲಯ ಮಠದ ಬಳಿಕ ಎಲೆಬಿಚ್ಚಾಲಿಯ ರಾಯರ ಏಕಶಿಲಾ ಸ್ವಪ್ನ ಬೃಂದಾವನಕ್ಕೆ ಭೇಟಿ ನೀಡಿ ದರ್ಶನ ಪಡೆದು ಯಾದಗಿರಿ ಜಿಲ್ಲಾ ಪ್ರವಾಸಕ್ಕೆ ತೆರಳಲಿದ್ದಾರೆ.Sign in to your account
Username or Email Address


Password

 Remember Me


