ಚಾಮರಾಜನಗರ: ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳು ಅಭಿವೃದ್ಧಿ ದೇಶದ ಪ್ರಗತಿಯನ್ನು ಸೂಚಿಸುತ್ತಿವೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ವ್ಯಾಖ್ಯಾನಿಸಿದರು.ಚಾಮರಾಜನಗರ ತಾಲೂಕಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಎಸ್.ಇ.ಪಿ. ಹಾಗೂ ಟಿ.ಎಸ್.ಪಿ, ಯೋಜನೆಡಿಯಲ್ಲಿ, ಕಾವೇರಿ ನೀರಾವರಿ ನಿಗಮದಿಂದ ಮಲ್ಲಯ್ಯನಪುರ ಗ್ರಾಮದ ಪರಿಶಿಷ್ಟ ಜಾತಿ ಬಡಾವಣೆಯ ಬೀದಿಗೆ ಅಂದಾಜು ಮೊತ್ತ 7 ಲಕ್ಷ ರೂ., ಬಸವಾಪುರ ಗ್ರಾಮದ ಪರಿಶಿಷ್ಟ ಪಂಗಡದ ನಾಯಕರ ಬಡಾವಣೆಯ ಬೀದಿಗೆ 10 ಲಕ್ಷ ರೂ., ಹೊಂಗಲವಾಡಿ ಗ್ರಾಮದ ಪರಿಶಿಷ್ಟ ಜಾತಿ ಕಾಲನಿಗೆ 10 ಲಕ್ಷ ರೂ., ಸಿದ್ದಯ್ಯನಪುರ ಗ್ರಾಮದ ಪರಿಶಿಷ್ಟ ಬಡಾವಣೆಯ ಬೀದಿಗೆ 20 ಲಕ್ಷ ರೂ.ಗಳಲ್ಲಿ ಸಿ.ಸಿ.ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು.ಭೂಮಿ ಪೂಜೆ ನಂತರ ಮಾತನಾಡಿದ ಅವರು, ತಮ್ಮ ಕ್ಷೇತ್ರ ವ್ಯಾಪ್ತಿಯ ಪ್ರತಿ ಗ್ರಾಮಗಳಿಗೆ ಅಗತ್ಯವಾಗಿ ಬೇಕಾದ ರಸ್ತೆ, ಚರಂಡಿ, ಸಮುದಾಯ ಭವನ, ಕುಡಿಯುವ ನೀರು ಸೇರಿದಂತೆ ಇತರೆ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲಾಗುತ್ತಿದೆ. ಇಂದು ಪರಿಶಿಷ್ಟ ಜಾತಿ ಬಡಾವಣೆ ಹಾಗೂ ಪರಿಶಿಷ್ಟ ಪಂಗಡದ ಬಡಾವಣೆಗೆಯ ಸಿ.ಸಿ.ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ ಎಂದರು. ಈ ವೇಳೆ ಕಾಮಗಾರಿ ನಿರ್ವಹಿಸುತ್ತಿರುವ ಇಂಜಿನಿಯರ್ ಗುತ್ತಿಗೆದಾರರು ಗುಣಮಟ್ಟದಿಂದ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.Sign in to your account
Username or Email Address


Password

 Remember Me


