ಚಿತ್ರದುರ್ಗ: ಒಗ್ಗಟ್ಟಿನ ಮಂತ್ರ ಜಪಿಸುತ್ತಾ ವಿಧಾನಸಭೆ ಚುನಾವಣೆಯಲ್ಲಿ ಗೂಳಿಹಟ್ಟಿ ಶೇಖರ್ ಪರ ಓಡಾಡಿದ್ದ ಚಿತ್ರದುರ್ಗ ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಶುರುವಾಗಿದೆ. ಈ ನಡುವೆ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಕ್ಕೆ ಜಿಲ್ಲಾಧ್ಯಕ್ಷ ನವೀನ್ ತಿರುಗೇಟು ನೀಡಿದ್ದಾರೆ.ಹೊಸದುರ್ಗದ ಬನಶಂಕರಿ ಭವನದಲ್ಲಿ ಭಾನುವಾರ ಸ್ವಾಭಿಮಾನಿ ಗೂಳಿಹಟ್ಟಿ ಶೇಖರ್ ಬಳಗದಿಂದ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಗೂಳಿಹಟ್ಟಿ ಶೇಖರ್ ಜಿಲ್ಲಾಧ್ಯಕ್ಷರ ವಿರುದ್ಧ ಆರೋಪ ಮಾಡಿದ್ದರು. ಈ ಆರೋಪಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಚಿತ್ರದುರ್ಗ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ, ಹೊಸದುರ್ಗ ಬಿಜೆಪಿ ಟಿಕೆಟ್ ಆಕಾಂಕ್ಷಿ ನವೀನ್, ತಮ್ಮ ವಿರುದ್ಧ ವರಿಷ್ಠರ ಬಳಿ ಇಲ್ಲಿನ ಬಿಜೆಪಿ ಮುಖಂಡರು ಚಾಳಿ ಹೇಳುತ್ತಿದ್ದಾರೆ ಎಂದು ಶಾಸಕರು ಆರೋಪಿಸಿದ್ದರು. ಗೂಳಿಹಟ್ಟಿ ಶೇಖರ್ ಹೇಳುವಂತೆ ನಾವು, ಚಾಡಿ ಹೇಳಿ ಅನುದಾನ ನಿಲ್ಲಿಸುವಂತಹ ಥರ್ಡ್ ಕ್ಲಾಸ್ ಮೆಂಟಾಲಿಟಯವರಲ್ಲ. ನಾನು ಯಾರ ಬಗ್ಗೆಯೂ ಚಾಡಿ ಹೇಳುವ ಅವಶ್ಯಕತೆ ಇಲ್ಲ ಎಂದು ತಿರುಗೇಟು ನೀಡಿದರು.ಇದೇ ವೇಳೆ ತಾಲೂಕು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಶಾಸಕರ ಕಡೆಗಣನೆ ವಿಚಾರವಾಗಿ ಪ್ರತಿಕ್ರಿಯಿಸಿದ ನವೀನ್, ಈ ವಿಷಯವನ್ನು ಕಾರ್ಯಕರ್ತರ ಸಭೆಯಲ್ಲಿ ಹೇಳುವಂತಹ ಅವಶ್ಯಕತೆ ಇರಲಿಲ್ಲ. ಜೊತೆಗೆ ನಾವು ಶಾಸಕರನ್ನು ಸೈಡ್ ಲೈನ್ ಮಾಡಿಲ್ಲ. ರಾಜ್ಯದ ಯಾವುದೇ ಶಾಸಕರು ಕೂಡ ಈ ರೀತಿ ಬೆಂಬಲಿಗರ ಸಭೆ ಕರೆಯುವುದಿಲ್ಲ. ಆದರೆ ಇವರು ಮಾತ್ರ ನಾನು ಬಿಜೆಪಿಗೆ ಬಂದು ತಪ್ಪು ಮಾಡಿದೆ ಎಂದು ಈ ಹಿಂದೆಯೂ ಹೇಳಿಕೆ ಕೊಟ್ಟಿದ್ದರು. ಈ ರೀತಿಯ ಹೇಳಿಕೆಯನ್ನು ನೀಡಬೇಡಿ ಎಂದು ಮನವಿ ಮಾಡಿದ್ದೇವೆ. ಅಲ್ಲದೇ ನಿಮ್ಮ ಅಭಿಮಾನಿಗಳು ಎಷ್ಟು ಪ್ರೀತಿಯಿಟ್ಟು ಮತ ಹಾಕಿದ್ದಾರೋ, ಅದರ ಎರಡರಷ್ಟು ಅಭಿಮಾನ ಇಟ್ಟು ಬಿಜೆಪಿ ಕಾರ್ಯಕರ್ತರು ನಿಮಗೆ ಮತ ಹಾಕಿದ್ದಾರೆ ಎಂದು ಟಾಂಗ್ ಕೊಟ್ಟರು. ಇದನ್ನು ಓದಿ: ಬಿಜೆಪಿ ವಿರುದ್ಧ ಮತ್ತೆ ಮುನಿದ ಗೂಳಿಹಟ್ಟಿ – ಮುಂದಿನ ಚುನಾವಣೆಗೆ ಪಕ್ಷೇತರನಾಗಿ ಸ್ಪರ್ಧಿಸೋ ಇಂಗಿತಶೇಖರ್ ಅವರು ತಮ್ಮ ಎಲ್ಲಾ ಸಭೆಗಳಲ್ಲಿ ನನ್ನ ಅಭಿಮಾನಿಗಳು ಬಿಜೆಪಿಗೆ ಹೊಂದಿಕೊಳ್ಳುತ್ತಿಲ್ಲ ಎಂದು ಹೇಳುತ್ತಾರೆ. ಅವರಿಗೆ ಇಂತವರನ್ನು ಅಧ್ಯಕ್ಷರನ್ನಾಗಿ ಮಾಡಿ ಎಂದು ಹೇಳುವ ನೈತಿಕತೆಯೇ ಇಲ್ಲ. ನಾನು ಬಿಜೆಪಿ, ನನ್ನ ಬೆಂಬಲಿಗರು ಬಿಜೆಪಿಯವರು ಎನ್ನುವ ಮನಸ್ಥಿತಿ ಅವರಲಿಲ್ಲ. ಇಂತಹ ಮನಸ್ಥಿತಿಯನ್ನು ಅವರು ಹೊಂದಿದ್ದಾರೆ ಎಂದು ಶಾಸಕರ ವಿರುದ್ಧ ನವೀನ್ ಗುಟುರು ಹಾಕಿದ್ದಾರೆ.ಕೆಲವರು ಶಾಸಕರಾಗಲು ತುದಿಗಾಲಲ್ಲಿ ನಿಂತಿದ್ದಾರೆ ಎಂಬ ಶಾಸಕ ಗೂಳಿಹಟ್ಟಿ ಶೇಖರ್ ಅವರ ಹೇಳಿಕೆ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, ಇಂತಹ ಮನೋಭವ ನನಗೆ ಇದ್ದಿದ್ದರೆ 2008 ರಲ್ಲೇ ಅವರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಿದೆ. ಆದರೆ ಪಕ್ಷದ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ಅವರ ಪಕ್ಷ ವಿರೋಧಿ ಹೇಳಿಕೆಗಳಿಗೆ ಸಮಯದ ಬಂದಾಗ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಮುಂದಿನ ಚುನಾವಣೆಯಲ್ಲಿ ಪಕ್ಷೇತರವಾಗಿ ನಿಲ್ಲಬೇಕೆಂದಿರೋ ಶಾಸಕರಿಗೆ ಚುನಾವಣೆ ಸಂದರ್ಭದಲ್ಲಿ ತಕ್ಕ ಉತ್ತರ ಕೊಡುತ್ತೇವೆ. ಆದರೆ ನಮ್ಮ ಪಕ್ಷ ಅವರೇ ಬೇಕು ಎಂದರೂ ಸಹ ಅವರ ಪರವಾಗಿ ಕೆಲಸ ಮಡುತ್ತೇವೆ ಎಂದು ಪಕ್ಷನಿಷ್ಠೆಯನ್ನು ವ್ಯಕ್ತಪಡಿಸಿದರು.Sign in to your account
Username or Email Address


Password

 Remember Me


