ಯಾದಗಿರಿ: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ (71) ಚಿಕಿತ್ಸೆ ಫಲಕಾರಿಯಾಗದೇ ಇಂದು (ಮಂಗಳವಾರ) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವೆಂಕಟರೆಡ್ಡಿ (Venkatreddy Mudnal) ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಮೋದಿ ಜನ್ಮದಿನದಂದೇ ಜನನ – ಪುತ್ರನಿಗೆ ‘ನರೇಂದ್ರ’ ಎಂದು ಹೆಸರಿಟ್ಟ ಕೊಡಗಿನ ದಂಪತಿ ವೆಂಕಟರೆಡ್ಡಿ ಅವರು 2018ರಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಿ ಯಾದಗಿರಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಪರಾಭವಗೊಂಡಿದ್ದರು. ಇವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆಪ್ತರಾಗಿದ್ದು, ಯಾದಗಿರಿಯ ಪುರಸಭೆಯ ಅಧ್ಯಕ್ಷರಾಗಿದ್ದರು. ಅಲ್ಲದೇ ಅಖಿಲ ಭಾರತ ವೀರಶೈವ ಮಹಾಸಭಾದ ಉಪಾಧ್ಯಕ್ಷರಾಗಿದ್ದರು. ಇದನ್ನೂ ಓದಿ: ವಿಎಓ/ಜಿಟಿಟಿಸಿ ಪರೀಕ್ಷೆ ಹೊಸದಾಗಿ ಅರ್ಜಿ ಸಲ್ಲಿಸಲು ಸೆ.19ರಿಂದ ಅವಕಾಶ: ಕೆಇಎಮೃತರ ಪಾರ್ಥಿವ ಶರೀರವನ್ನು ಇಂದು ರಾತ್ರಿ ಯಾದಗಿರಿಗೆ ತರಲಾಗುತ್ತದೆ. ನಾಳೆ (ಬುಧವಾರ) ಸಂಜೆ ಯಾದಗಿರಿ ತಾಲೂಕಿನಲ್ಲಿರುವ ಸ್ವಗ್ರಾಮದ ಜಮೀನಿನಲ್ಲಿ ವೆಂಕಟರೆಡ್ಡಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ – ನಾಳೆಗೆ ಅರ್ಜಿ ವಿಚಾರಣೆವಿಜಯೇಂದ್ರ ಸಂತಾಪ:
ಇನ್ನು ವೆಂಕಟರೆಡ್ಡಿ ಮುದ್ನಾಳ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತೀವ್ರ ಸಂತಾಪ ಸೂಚಿಸಿದ್ದಾರೆ. ನೇರನುಡಿ, ಜನಾನುರಾಗಿಯಾಗಿದ್ದ ವೆಂಕಟರೆಡ್ಡಿ ಮುದ್ನಾಳ ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ತಿಳಿದು ತುಂಬಾ ದುಃಖವಾಗಿದೆ. ಕಲ್ಯಾಣ ಕರ್ನಾಟಕದ ಹಿರಿಯ ರಾಜಕಾರಣಿಗಳಾದ ಮುದ್ನಾಳ ಅವರು, ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಗಣನೀಯ ಸೇವೆ ಸಲ್ಲಿಸಿದವರು. ಶಾಸಕರಾಗಿ ಸಾಮಾಜಿಕ, ರಾಜಕೀಯವಾಗಿ ತಮ್ಮ ಜಿಲ್ಲೆಯ ಅಭಿವೃದ್ಧಿಗೆ ಕಾರಣಕರ್ತರು. ಅವರ ಕುಟುಂಬಸ್ಥರು ಬಂಧುಗಳು, ಹಿತೈಷಿಗಳು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ಮಹಿಳಾ ವೈದ್ಯರಿಗೆ ನೈಟ್ ಶಿಫ್ಟ್ ತೆಗೆದು ಅಧಿಸೂಚನೆ – ಮಮತಾ ಸರ್ಕಾರಕ್ಕೆ ಸುಪ್ರೀಂ ಚಾಟಿ






 Advertisement 




Sign in to your account
Username or Email Address


Password

 Remember Me


