ಚಾಮರಾಜನಗರ: ಕರ್ನಾಟಕದಲ್ಲಿ ಅತೀ ಹೆಚ್ಚು ಆದಾಯ ತಂದುಕೊಡುವ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಮಲೆ ಮಹೇಶ್ವರ ದೇವಾಲಯದಲ್ಲಿ ಈ ಬಾರಿ ದಾಖಲೆಯ ಪ್ರಮಾಣದಲ್ಲಿ ಹುಂಡಿ ಹಣ ಸಂಗ್ರಹವಾಗಿದೆ.ಮೇ ತಿಂಗಳ ಹುಂಡಿ ಎಣಿಕೆ ಕಾರ್ಯ ಗುರುವಾರ ತಡ ರಾತ್ರಿ ಮುಗಿದಿದ್ದು, 28 ದಿನಗಳಲ್ಲಿ ಬರೋಬ್ಬರಿ 1 ಕೋಟಿ 28 ಲಕ್ಷ 50 ಸಾವಿರ 373 ರೂಪಾಯಿ ನಗದು ಹಣ ಸಂಗ್ರಹವಾಗಿದೆ. ನಗದು ಹೊರತುಪಡಿಸಿ 70 ಗ್ರಾಂ ಚಿನ್ನ, 1 ಕೆಜಿ 100 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಆನಂದ್ ಮತ್ತು ಶ್ರೀ ಸಾಲೂರು ಬೃಹನ್ಮಠದ ಶ್ರೀ ಶ್ರೀ ಪಟ್ಟದ ಗುರುಸ್ವಾಮಿಗಳವರ ಸಮ್ಮುಖದಲ್ಲಿ ನೂರಾರು ಸಿಬ್ಬಂದಿಗಳು ಹುಂಡಿ ಕಾರ್ಯ ನಡೆಸಿದರು. ಪ್ರತಿ ತಿಂಗಳಿಗೊಮ್ಮೆ ಹುಂಡಿ ಎಣಕೆ ಕಾರ್ಯ ನಡೆಯುತ್ತಿದೆ.ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಇದಾಗಿದ್ದು, ಕಳೆದ ಬಾರಿ 32 ದಿನಕ್ಕೆ 1.60 ಕೋಟಿ ರೂ. ಸಂಗ್ರಹವಾಗಿತ್ತು. ಈಗ ದಿನದಿಂದ ದಿನಕ್ಕೆ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ದೇವಸ್ಥಾನದ ಹುಂಡಿಯಲ್ಲಿ ಕಾಣಿಕೆ ಕೂಡ ಹೆಚ್ಚಾಗಿದೆ.ದೇವಾಲಯಕ್ಕೆ ಇಷ್ಟು ಅದಾಯ ಬಂದರೂ ಮೂಲಭೂತ ಸೌಕರ್ಯ ಮಾಡಲಿಲ್ಲ ಎಂದು ಜನರು ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ದೇವಾಲಯದಲ್ಲಿ ಕುಡಿಯುವ ನೀರು, ರಸ್ತೆಯ ಸೌಲಭ್ಯ ಇಲ್ಲ. ಅಭಿವೃದ್ಧಿ ಪ್ರಾಧಿಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಜನರು ಆಗ್ರಹಿಸಿದ್ದಾರೆ.Sign in to your account
Username or Email Address


Password

 Remember Me


