ಯಾದಗಿರಿ: ಸರ್ಕಾರದ ದುಡ್ಡಿನಲ್ಲಿ ಜೆಡಿಎಸ್ ಗ್ರಾಮ ವಾಸ್ತವ್ಯ ಎಂಬ ಜಾತ್ರೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ವ್ಯಂಗ್ಯವಾಡಿದ್ದಾರೆ.ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಕನಸಿನಲ್ಲೂ ಮೋದಿ ಕಾಡುತ್ತಿದ್ದಾರೆ. ವೈಟಿಪಿಎಸ್ ಸಿಬ್ಬಂದಿಗೆ ಲಾಠಿ ಬೀಸಲು ಹೇಳುತ್ತಿರಾ. ಕರ್ನಾಟಕದಲ್ಲಿ ಪೊಲೀಸ್ ರಾಜ್ಯ ನಿರ್ಮಿಸಲು ನೀವು ಹೊರಟಿದ್ದೀರಾ ಎಂದು ಪ್ರಶ್ನಿಸಿ ಮುಖ್ಯಮಂತ್ರಿಗಳ ವಿರುದ್ಧ ಗುಡುಗಿದರು.ಸರ್ಕಾರದ ದುಡ್ಡಿನಲ್ಲಿ ಸಿಎಂ ಜೆಡಿಎಸ್ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಈ ಬಗ್ಗೆ ಸ್ಪಷ್ಟನೆಯನ್ನು ಕೊಡಬೇಕು. ಮಾಜಿ ಪ್ರಧಾನಿ ದೇವೇಗೌಡರು ಪುತ್ರನ ವ್ಯಾಮೋಹದಲ್ಲಿದ್ದಾರೆ. ಸಿಎಂ ಏನೇ ತಪ್ಪು ಮಾಡಿದರೂ ದೊಡ್ಡಗೌಡರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಶಾಲೆಗಳಿಗೆ ಮೂಲ ಸೌಕರ್ಯವನ್ನು ನೀಡದೆ. ಸಿಎಂ ‘ಗ್ರಾಮ ಡ್ರಾಮ’ ಮಾಡುತ್ತಿದ್ದಾರೆ. ನಾಟಕ ಮಾಡೋದನ್ನು ಬಿಟ್ಟು ನಿಜವಾದ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಹೇಳಿದರು.ಹೊಳೆನರಸೀಪುರಕ್ಕೆ ಮೆಡಿಕಲ್ ಕಾಲೇಜು ಮಂಜೂರು ಮಾಡಿದ್ದಾರೆ. ಆದರೆ ಯಾದಗಿರಿಗೆ ಸಿಎಂ ಮೆಡಿಕಲ್ ಕಾಲೇಜು ಬೇಡ ಎನ್ನುತ್ತಾರೆ. ಸಿಎಂ ಗ್ರಾಮ ವಾಸ್ತವ್ಯಕ್ಕೆ ನಿಂಬೆಹಣ್ಣಿನ ಶಕ್ತಿ ಅಡ್ಡಿ ಮಾಡುತ್ತಿದೆ ಎಂದು ದೇವೇಗೌಡರ ಕಾಲೆಳೆದ ರವಿಕುಮಾರ್, ಒಂದು ವರ್ಷ ರೆಸಾರ್ಟ್ ವಾಸವಾಯ್ತು, ಈಗ ಗ್ರಾಮ ಡ್ರಾಮ ನಂತರ ಅಮೆರಿಕಾಗೆ ಸಿಎಂ ತೆರಳಲಿದ್ದಾರೆ ಎಂದು ವ್ಯಂಗ್ಯವಾಡಿದರು.Sign in to your account
Username or Email Address


Password

 Remember Me


