ಬೆಂಗಳೂರು: ಪರಿಶಿಷ್ಟ ಪಂಗಡದವರಿಗೆ ಶೇಕಡಾ 7.5ರಷ್ಟು ಮೀಸಲಾತಿಗೆ ಆಗ್ರಹಿಸಿ ವಾಲ್ಮೀಕಿ ಸಮುದಾಯ ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಿಂದ ಕೈಗೊಂಡಿದ್ದ ಪಾದಯಾತ್ರೆ ಬೆಂಗಳೂರು ತಲುಪಿದ್ದು, ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದಾರೆ.ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮಿಜಿಯಿಂದ ಪಾದಯಾತ್ರೆ ನೇತೃತ್ವ ವಹಿಸಿದ್ದು, ಧರಣಿಯಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿದ್ದಾರೆ. ಮೀಸಲಾತಿಗೆ ಒತ್ತಾಯಿಸಿ ಇಂದು ಬೃಹತ್ ಶಕ್ತಿ ಪ್ರದರ್ಶನಕ್ಕೆ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.ಜೂನ್ 9 ರಂದು ಆರಂಭವಾಗಿದ್ದ ಪಾದಯಾತ್ರೆ ಮೂಲಕ ಸಮುದಾಯದ ಸಾವಿರಾರು ಜನರು ಬೆಂಗಳೂರಿಗೆ ಆಗಮಿಸಿದ್ದಾರೆ. ದಾವಣಗೆರೆಯ ರಾಜನಹಳ್ಳಿಯಿಂದ ಆರಂಭಗೊಂಡಿದ್ದ ಪಾದಯಾತ್ರೆಗೆ ರಾಜನಹಳ್ಳಿ, ಜಗಳೂರು, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಶಿರಾ, ತುಮಕೂರು, ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ, ಶಿಡ್ಲಘಟ್ಟ, ಹೊಸಕೋಟೆ ಹಾಗೂ ಕೆಆರ್ ಪುರಂ ಮೂಲಕ ಪಾದಯಾತ್ರೆ ನಡೆದಿತ್ತು. ರಾಜ್ಯದ ವಿವಿಧ ಜಿಲ್ಲೆಗಳಿಂದ ವಾಲ್ಮೀಕಿ ಸಮಾಜದ ಜನರು ಧರಣಿಯಲ್ಲಿ ಭಾಗವಹಿಸುತ್ತಿದ್ದಾರೆ. ರಾಜ್ಯ ಸರ್ಕಾರಕ್ಕೆ ತಮ್ಮ ಬೇಡಿಕೆಯ ಮನವರಿಕೆ ಮಾಡುವ ನಿಟ್ಟಿನಲ್ಲಿ ಧರಣಿ ನಡೆಸಲಾಗುತ್ತಿದೆ.ಅನಿರ್ದಿಷ್ಟಾ ಅವಧಿಯವರಿಗೆ ಪ್ರತಿಭಟನೆ ಮುಂದುವರಿಯಲಿದೆ. ಇದೇ ಸಂದರ್ಭದಲ್ಲಿ ಮೀಸಲಾತಿ ಹೆಚ್ಚಳ ಮಾಡಬೇಕು ಎಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟ ಪ್ರಯತ್ನಿಸಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಇತ್ತ ಹೋರಾಟಗಾರರ ಪ್ರತಿಭಟನೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ.Sign in to your account
Username or Email Address


Password

 Remember Me


