ಬಳ್ಳಾರಿ: ಶಿಬಿರಾರ್ಥಿಯೊಬ್ಬ ಮದ್ಯವರ್ಜನ ಶಿಬಿರದಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಬೃಹತ್ ಬಂಡೆಯ ಮಧ್ಯೆ ಸಿಕ್ಕಿ ನರಳಾಡಿದ ಘಟನೆ ಹಂಪಿಯಲ್ಲಿ ನಡೆದಿದೆ.ಹಂಪಿ ಕಡಲೇ ಕಾಳು ಗಣೇಶ ಹಿಂಭಾಗದಲ್ಲಿ ಇರುವ ಶಿವರಾಂ ಅವಧೂತರ ಮಠದಲ್ಲಿ ಕಳೆದ ನಾಲ್ಕು ದಿನಗಳಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ಮದ್ಯವರ್ಜನ ಶಿಬಿರ ನಡೆಯುತ್ತಿದೆ. ಈ ಶಿಬಿರದಲ್ಲಿ ಸುಮಾರು ಅರವತ್ತಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗಿಯಾಗಿದ್ದರು.ಇದರಲ್ಲಿ ಕೊಪ್ಪಳ ಜಿಲ್ಲೆಯ ಹುಲಿಗಿ ಮೂಲದ ದೇವೇಂದ್ರ ಶಿಬಿರದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾಗ ಮಠದ ಪಕ್ಕದಲ್ಲಿರುವ ಎರಡು ಬೃಹತ್ ಬಂಡೆಗಳ ಮಧ್ಯೆ ಸಿಕ್ಕಿ ಹಾಕಿಕೊಂಡು ಹೊರಗೆ ಬರಲಾಗದೆ ನರಳಾಡಿದ್ದಾನೆ.ನಂತರ ಸ್ಥಳೀಯರು ವ್ಯಕ್ತಿಯನ್ನು ಗಮನಿಸಿ ಹಂಪಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಅಗ್ನಿಶಾಮಕ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿದ್ದಾರೆ. ಸತತ 4 ಗಂಟೆ ಕಾರ್ಯಾಚರಣೆ ನಡೆಸಿದ ಹೋಮ್ ಗಾರ್ಡ್ ಸಿಬ್ಬಂದಿ ಮತ್ತು ಅಗ್ನಿಶಾಮಕ ಸಿಬ್ಬಂದಿ ದೇವೇಂದ್ರನನ್ನು ರಕ್ಷಿಸಿದ್ದಾರೆ.ಪ್ರಾಣಪಾಯದಿಂದ ಪಾರಾಗಿರುವ ದೇವೇಂದ್ರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.Sign in to your account
Username or Email Address


Password

 Remember Me


