ಬೆಂಗಳೂರು: ರಾಜ್ಯದ ಶಕ್ತಿಕೇಂದ್ರ ವಿಧಾನಸೌಧದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.45 ವರ್ಷದ ರೇವಣ್ಣ ಕುಮಾರ್ ಎಂದು ಗುರುತಿಸಲಾಗಿದ್ದು, ಚಿಕ್ಕಬಳ್ಳಾಪುರದ ಆನೂರು ನಿವಾಸಿ ಎನ್ನಲಾಗಿದೆ. ಮೂರನೇ ಮಹಡಿ ಶೌಚಾಲಯ ಕೊಠಡಿ ಸಂಖ್ಯೆ 332 ರಲ್ಲಿ ಈ ಘಟನೆ ನಡೆದಿದೆ.ಮಾಹಿತಿ ಪ್ರಕಾರ ರೇವಣ್ಣಕುಮಾರ್ ಓರ್ವ ಸಾರ್ವಜನಿಕನಾಗಿದ್ದು, ವಿಧಾನಸೌಧದ ಮೂರನೇ ಮಹಡಿಯಲ್ಲಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ರೇವಣ್ಣ ಕುಮಾರ್ ಅವರು ಪ್ಲಾಸ್ಟಿಕ್ ಕವರ್ ನಲ್ಲಿ ಹಲವು ದಾಖಲೆ ಪತ್ರಗಳನ್ನು ತಂದಿದ್ದರು. ಸದ್ಯ ಘಟನಾ ಸ್ಥಳಕ್ಕೆ ಕೇಂದ್ರವಲಯ ಡಿಸಿಪಿ ದೇವರಾಜ್ ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎನ್ನುವುದು ತಿಳಿದುಬಂದಿಲ್ಲ.






 Advertisement 




Sign in to your account
Username or Email Address


Password

 Remember Me


