ಬಳ್ಳಾರಿ: ವೈದ್ಯಕೀಯ ವಿದ್ಯಾರ್ಥಿಗಳ ಶುಲ್ಕ ಏರಿಕೆ ಇಂದಿನ ವ್ಯವಸ್ಥೆಗೆ ಅನುಗುಣವಾಗಿದೆ ಎಂದು ಶುಲ್ಕ ಏರಿಕೆ ಕ್ರಮವನ್ನು ವೈದ್ಯಕೀಯ ಶಿಕ್ಷಣ ಸಚಿವ ಈ. ತುಕಾರಾಂ ಸಮರ್ಥಿಸಿಕೊಂಡಿದ್ದಾರೆ.ಜಿಲ್ಲೆಯ ಜಿಂದಾಲ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಎಲ್ಲಾ ಸೌಕರ್ಯಗಳನ್ನು ಒದಗಿಸಬೇಕಾದಾಗ ಹಣಕಾಸಿನ ಅವಶ್ಯಕತೆ ಇರುತ್ತದೆ. ಹಾಗಾಗಿ ಶುಲ್ಕ ಏರಿಕೆ ಅನಿವಾರ್ಯವಾಗಿದೆ ಎಂದು ಹೇಳಿದರು.ಇದೇ ವೇಳೆ ಚುನಾವಣೆ ನಂತರ ಜಿಲ್ಲೆಯ ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಬಳ್ಳಾರಿಗೆ ಕಾಲಿಟ್ಟಿಲ್ಲ ಎನ್ನುವ ಆರೋಪವನ್ನು ತಳ್ಳಿ ಹಾಕಿದ ಸಚಿವ ತುಕಾರಾಂ, ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿ ಡಿ.ಕೆ ಶಿವಕುಮಾರ್‍ರವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ನನಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಕೊಟ್ಟಿದ್ದಾರೆ. ಈ ವಿಚಾರಗಳು ಹೈಕಮಾಂಡ್ ತಿರ್ಮಾನಗಳಾಗಿದ್ದು, ಆದರ ಬಗ್ಗೆ ನಾನು ಮಾತನಾಡುವುದಿಲ್ಲ. ಅಲ್ಲದೇ ಪಕ್ಷ ಬಳ್ಳಾರಿಯ ಜವಾಬ್ದಾರಿಯನ್ನು ಕೊಟ್ಟರೆ ನಾನು ನಿರ್ವಹಿಸುವೆ ಎಂದು ಹೇಳುವ ಮೂಲಕ ಬಳ್ಳಾರಿ ಉಸ್ತುವಾರಿ ಸಚಿವನಾಗುವ ಆಸೆಯನ್ನು ಹೊರ ಹಾಕಿದರು.ಮೈತ್ರಿ ಸರ್ಕಾರ ಬಗ್ಗೆ ಮಾಜಿ ಸಂಸದ ವೀರಪ್ಪ ಮೊಯ್ಲಿ ಅಸಮಧಾನ ಹೇಳಿಕೆ ವಿಚಾರ ಪ್ರತಿಕ್ರಿಯಿಸಿ, ಮೈತ್ರಿಯಲ್ಲಿ ಜತೆಗೂಡಿ ಚುನಾವಣೆ ಎದುರಿಸಿದ್ದೇವೆ. ಪ್ರತ್ಯೇಕ ಚುನಾವಣೆ ಮಾಡಿದ್ದರೆ ಅನುಕೂಲವಾಗುತ್ತೇನೋ, ಜತೆಗೂಡಿ ಚುನಾವಣೆ ನಡೆಸಿದ್ದರಿಂದ ಅನಾನುಕೂಲವಾಗಿದೆ ಎಂಬ ವಿಚಾರಗಳು ಚರ್ಚೆಗೆ ಬರುವುದು ಸಹಜ. ಅಲ್ಲದೆ ವೀರಪ್ಪ ಮೊಯ್ಲಿ ಸಾಹೇಬರು ಹಿರಿಯರು ಅವರು ವಿಶ್ಲೇಷಣೆ ಮಾಡುತ್ತಾರೆ. ಆ ಬಗ್ಗೆ ನಾನು ಮಾತನಾಡಲ್ಲ ಎಂದು ಹೇಳಿದರು.[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]Sign in to your account
Username or Email Address


Password

 Remember Me


