ಮಂಗಳೂರು: ಗ್ರಾಮ ವಾಸ್ತವ್ಯದಲ್ಲಿ ಇರುವ ಸಿಎಂ ಕನಿಷ್ಠ ಒಂದು ಗಂಟೆ ಕಾಲ ಜನರ ಸಮಸ್ಯೆ ಆಲಿಸಬೇಕು. ಸಾಧ್ಯವಾದರೆ ಸ್ಥಳದಲ್ಲೇ ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಲಹೆ ನೀಡಿದ್ದಾರೆ.ಈ ಬಗ್ಗೆ ಮಾತನಾಡಿದ ವೀರೇಂದ್ರ ಹೆಗ್ಗಡೆ ಅವರು, ಕೆಲವು ಬಾರಿ ಅಧಿಕಾರಿಗಳು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕೊಡುತ್ತಾರೆ. ಆದರೆ ಬಹುತೇಕರಿಗೆ ಸಮಸ್ಯೆಗಳ ಬಗ್ಗೆ ಗೊತ್ತಿರಲ್ಲ. ಗ್ರಾಮ ವಾಸ್ತವ್ಯ ಸಂಪರ್ಕ ಸಭೆಯಾಗಿಯೂ ಪರಿವರ್ತನೆಯಾದರೆ ಹಳ್ಳಿಗಳ ಸಮಸ್ಯೆ ತಿಳಿಯುತ್ತೆ. ಗ್ರಾಮ ವಾಸ್ತವ್ಯದ ಮೂಲಕ ಈ ರೀತಿ ಮಾಹಿತಿ ಸಂಗ್ರಹಿಸುವುದು ಒಂದು ಉತ್ತಮ ನಡೆ ಎಂದರು.ಈ ಹಿಂದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಕೂಡ ಇಂತಹ ಜನಸಂಪರ್ಕವನ್ನು ಆರಂಭಿಸಿದ್ದರು. ಅಲ್ಲದೆ ಆತ್ಮಹತ್ಯೆಯಂತಹ ಪ್ರಕರಣಗಳು ನಡೆದ ಬಳಿಕ ಪರಿಹಾರ ನೀಡುವ ಬದಲು ಮೊದಲೇ ಸಮಸ್ಯೆ ತಿಳಿದುಕೊಳ್ಳಬೇಕು. ಅಲ್ಲದೆ ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಅಧಿಕಾರಿಗಳು ಸಿಎಂ ಅವರನ್ನು ಸುತ್ತುವರಿಯಬಾರದು. ಜನರೊಂದಿಗೆ ಮುಕ್ತವಾಗಿ ಮಾತನಾಡಲು ಅವಕಾಶ ಕೊಡಬೇಕು. ಜನರೊಂದಿಗೆ ನೇರವಾಗಿ ಮಾತುಕತೆ ನಡೆಸಿದರೆ ಜ್ವಲಂತ ಸಮಸ್ಯೆ ಅರಿವಿಗೆ ಬರುತ್ತೆ ಎಂದು ಸಲಹೆ ನೀಡಿದರು.[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]Sign in to your account
Username or Email Address


Password

 Remember Me


