ಶಿವಮೊಗ್ಗ: ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಮೋಹನ್ ರೆಡ್ಡಿ ಜೊತೆ ಸ್ಥಳೀಯ ಗ್ರಾಮಸ್ಥರು ಸೇರಿ ವಿಷಯ ಕುಡಿಯಲು ಮುಂದಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.ಪಾಲಿಕೆ ವ್ಯಾಪ್ತಿಯ 5ನೇ ವಾರ್ಡ್ ನಲ್ಲಿರುವ ಪುರಲೆ ಬಡಾವಣೆಯಲ್ಲಿ ಶುದ್ಧೀಕರಣ ಘಟಕ ನಿರ್ಮಾಣಕ್ಕೆ ಗುಜರಾತ್ ಮೂಲದ ಸಂಸ್ಥೆ ಮುಂದಾಗಿದೆ. ಇದೂವರೆಗೂ ಈ ಕಾಮಗಾರಿ ಆರಂಭಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.ಆದರೆ ಇಂದು ನೂರಾರು ಪೊಲೀಸರ ಬಿಗಿ ಭದ್ರತೆಯಲ್ಲಿ ಕಾಮಗಾರಿ ಆರಂಭಗೊಂಡಿತ್ತು. ಇದನ್ನು ತಪ್ಪಿಸಲು ಬೆಳಗ್ಗೆಯಿಂದಲೇ ಕಾಮಗಾರಿ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾಜಿ ಕಾರ್ಪೋರೇಟರ್ ಮೋಹನ್ ರೆಡ್ಡಿ ಮತ್ತು ಸ್ಥಳೀಯ ಗ್ರಾಮಸ್ಥರು ಸೇರಿ ವಿಷ ಕುಡಿಯಲು ನಡೆಸಿದ ಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದಾರೆ.ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುವ ಈ ಘಟಕವನ್ನು ಇಲ್ಲಿಂದ ಸ್ಥಳಾಂತರ ಮಾಡಿ ಎಂದು ಸ್ಥಳೀಯರು ಆಗ್ರಹಿಸಿ ಕಾಮಗಾರಿ ಸ್ಥಳದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಪ್ರತಿಭಟನಾ ನಿರತರನ್ನು ಭೇಟಿ ಮಾಡಿದ ಜಿಲ್ಲಾಧಿಕಾರಿ, ಈ ಕಾಮಗಾರಿ ಸರ್ಕಾರ ಮಟ್ಟದಲ್ಲಿ ನಿರ್ಣಯ ಆಗಿದ್ದು, ಇದನ್ನು ತಡೆಯಲು ನನಗೆ ಅಧಿಕಾರ ಇಲ್ಲ ಎಂದು ಹೇಳಿದರು.ಈ ಸಂಬಂಧ ಅಧಿಕಾರಿಗಳು ಮತ್ತು ಪ್ರತಿಭಟನ ನಿರತರ ನಡುವೇ ಮಾತುಕತೆ ನಡೆದು ನಂತರ ಪ್ರತಿಭಟನಾಕಾರರು ಕಾನೂನು ಹೋರಾಟ ಕೈಗೊಳ್ಳಲು ನಿರ್ಧರಿಸಿ, ಪ್ರತಿಭಟನೆ ಹಿಂಪಡೆದಿದ್ದಾರೆ.[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]Sign in to your account
Username or Email Address


Password

 Remember Me


