ಚಿಕ್ಕಬಳ್ಳಾಪುರ: ಆಟೋ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಗ್ರಾಮದ ಬಳಿ ನಡೆದಿದೆ.ಹಸೀನಾ(30), ಸಾನಿಯಾ(17), ಮಕ್ಕಳಾದ ಶಾಜಿಯಾ(8) ಹಾಗೂ ಜೋಯಾ(5) ಮೃತರು. ಇವರೆಲ್ಲರೂ ಹೊಸಕೋಟೆ ತಾಲೂಕಿನ ಗಿಡ್ಡಪ್ಪನಹಳ್ಳಿ ನಿವಾಸಿಗಳಾಗಿದ್ದು, ಆಧಾರ್ ಕಾರ್ಡ್ ಮಾಡಿಸಲು ದೇವನಹಳ್ಳಿ-ದೊಡ್ಡಬಳ್ಳಾಪುರ ಮಾರ್ಗ ಮಧ್ಯೆ ಚಪ್ಪರಕಲ್ಲು ಬಳಿಯಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನಕ್ಕೆ ಆಟೋ ಮೂಲಕ ತೆರಳಿದ್ದರು.ಈ ವೇಳೆ ಮಾರ್ಗ ಮಧ್ಯೆ ಗುಂಡಿ ತಪ್ಪಿಸಲು ಹೋದಾಗ ಆಟೋ ಚಕ್ರವೊಂದು ಕಳಚಿದೆ. ಪರಿಣಾಮ ಬಸ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಆಟೋದಲ್ಲಿ ಒಟ್ಟು 11 ಮಂದಿ ಇದ್ದು ನಾಲ್ವರು ಮೃತಪಟ್ಟರೆ, ಉಳಿದ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ದೇವನಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ನಾಲ್ವರನ್ನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.ಅಪಘಾತದಿಂದಾಗಿ ಆಟೋ ಸಂಪೂರ್ಣ ಜಖಂಗೊಂಡಿದ್ದು ಸ್ಥಳಕ್ಕೆ ಭೇಟಿ ನೀಡಿದ್ದ ವಿಶ್ವನಾಥಪುರ ಪಿಎಸ್ ಐ ಮಂಜುನಾಥ್ ಗಾಯಾಳುಗಳನ್ನ ಆಸ್ಪತ್ರೆಗೆ ರವಾನಿಸಿ ಅಪಘಾತಕ್ಕೀಡಾದ ಆಟೋವನ್ನು ಸ್ಥಳಾಂತರ ಮಾಡಿಸಿದ್ದಾರೆ.ಈ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮ ಪಂಚಾಯ್ತಿ ತಮ್ಮ ಊರುಗಳಲ್ಲೇ ಮಾಡಿದರೆ ಅವರು ಆಧಾರ್ ಕಾರ್ಡ್ ಮಾಡಿಸಲು ಡಿಸಿ ಕಚೇರಿಯತ್ತ ಬರುತ್ತಿರಲಿಲ್ಲ. ಈ ಅಪಘಾತ ಆಗುವ ಸಂಭವವೂ ಇರುತ್ತಿರಲಿಲ್ಲ ಎಂದು ಮೃತರು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.






 Advertisement 




Sign in to your account
Username or Email Address


Password

 Remember Me


