ಯಾದಗಿರಿ: ಸಿಎಂ ಮಾಡುತ್ತಿರುವ ಗ್ರಾಮ ವಾಸ್ತವ್ಯ ದುಂದು ವೆಚ್ಚವಾಗಿದ್ದು, ಜನರ ಗಮನವನ್ನು ತಮ್ಮತ್ತ ಸೆಳೆಯಲು ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯಕ್ಕೆ ಮುಂದಾಗಿದ್ದಾರೆಂದು ರೈತ ಸಂಘದ ರಾಜ್ಯಾಧ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ್ ಟೀಕಿಸಿದ್ದಾರೆ.ಜಿಲ್ಲೆಯಲ್ಲಿ ರೈತ ಸಂಘದ ಕಚೇರಿ ಉದ್ಘಾಟನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯ ಮೈತ್ರಿ ಸರ್ಕಾರ ರಾಜ್ಯದ ಜನರ ಮನಸ್ಸಿನಲ್ಲಿ ಅಸ್ಥಿರಗೊಂಡಿದೆ. ಹೀಗಾಗಿ ಜನರ ಗಮನ ಸೆಳೆಯಲು ಸಿಎಂ ಈ ಗ್ರಾಮ ವಾಸ್ತವ್ಯಕ್ಕೆ ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿಗಳನ್ನು ತರಾಟೆಗೆ ತೆಗೆದುಕೊಂಡರು.ಸಿಎಂ ವಿಧಾನಸೌಧಲ್ಲಿಯೇ ಕುಳಿತು ಗ್ರಾಮಗಳ ಅಭಿವೃದ್ಧಿಗೆ ಸೂಕ್ತ ಕಾನೂನು ತಂದು ಹಳ್ಳಿಗಳನ್ನು ಅಭಿವೃದ್ಧಿಪಡಿಸಬಹುದು. ಆದರೆ ಗ್ರಾಮ ವಾಸ್ತವ್ಯ ಮಾಡಿ ಜನರ ಮನಸ್ಸು ಬೇರೆ ರೀತಿಗೆ ತಿರುಗಿಸಲು ಸಿಎಂ ಮುಂದಾಗಿದ್ದಾರೆ. ಇನ್ನೂ ರೈತರ ಸಂಪೂರ್ಣ ಸಾಲ ಮನ್ನಾ ಮಾಡದೆ, ಸಿಎಂ ಗ್ರಾಮ ವಾಸ್ತವ್ಯ ಮಾಡುತ್ತಿರುವುದಕ್ಕೆ ನಮ್ಮ ವಿರೋಧವಿದೆ ಎಂದು ಗುಡುಗಿದರು.ಸಿಎಂ ಜಿಲ್ಲೆಗೆ ಗ್ರಾಮ ವಾಸ್ತವ್ಯಕ್ಕೆ ಬರುವ ದಿನ ರೈತ ಸಂಘದಿಂದ ಉಗ್ರ ಹೋರಾಟ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳಿಗೆ ಎಚ್ಚರಿಕೆ ನೀಡಿದರು.Sign in to your account
Username or Email Address


Password

 Remember Me


