ಮೈಸೂರು: ಕೊಡಗು ಆಸ್ಪತ್ರೆ ಅಭಿವೃದ್ಧಿ ಆಗುತ್ತಿದೆ. ಹೀಗಿರುವಾಗ ಅಭಿಯಾನ ಮಾಡುವುದರಲ್ಲಿ ಅರ್ಥ ಇಲ್ಲ ಎಂದು ಸಚಿವ ಸಾ.ರಾ. ಮಹೇಶ್ ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರಿಗೆ ಪ್ರಚಾರದ ಹುಚ್ಚು ಇದೆ. ಹೀಗಾಗಿ ಅವರಿಗೆ ಇಷ್ಟ ಬಂದ ಹಾಗೇ ಮಾತನಾಡುತ್ತಿದ್ದಾರೆ. ಸಿಎಂ ಈಗಾಗಲೇ ಕೊಡಗು ಜಿಲ್ಲಾಸ್ಪತ್ರೆ ಅಭಿವೃದ್ಧಿಗೆ ನೂರು ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಅಲ್ಲದೆ ಈಗಾಗಲೇ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಹೀಗಿರುವಾಗ ಅಭಿಯಾನ ಮಾಡುವುದರಲ್ಲಿ ಯಾವುದೇ ಅರ್ಥ ಇಲ್ಲ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಕೊಡಗು ಆಸ್ಪತ್ರೆ ಅಭಿಯಾನಕ್ಕೆ ಕೈಜೋಡಿಸಿದ ಕಿಚ್ಚ ಸುದೀಪ್ಸದ್ಯ ಕೊಡಗು ಆಸ್ಪತ್ರೆ ಅಭಿವೃದ್ಧಿ ಆಗುತ್ತಿದೆ. ಈ ಹಂತದಲ್ಲಿ ಅಭಿಯಾನ ಮಾಡುತ್ತಿದ್ದಾರೆ. ಮುಂದೆ ಆಸ್ಪತ್ರೆ ಚೆನ್ನಾಗಿ ಆದರೆ ನಮ್ಮ ಒತ್ತಡದಿಂದಲೇ ಕೆಲಸ ಆಯಿತು ಎಂದು ಹೇಳಿಕೊಳ್ಳುತ್ತಾರೆ ಎಂದರು. ಇದನ್ನು ಓದಿ:ಸಿಎಂ ಬಳಿ ನಟಿ ರಶ್ಮಿಕಾ, ಹರ್ಷಿಕಾ ಮನವಿಇದೇ ವೇಳೆ ಉನ್ನತ ಶಿಕ್ಷಣ ಸಚಿವ ಜಿ.ಡಿ ದೇವೇಗೌಡ ಮಾತನಾಡಿ, ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಮಾತನಾಡಿ, ವಿಶ್ವನಾಥ್ ಅವರ ರಾಜೀನಾಮೆ ಇನ್ನೂ ಅಂಗೀಕಾರ ಆಗಿಲ್ಲ. ಅಂಗೀಕಾರ ಆದ ಮೇಲೆ ಬದಲಾವಣೆ ಬಗ್ಗೆ ಮಾತನಾಡುತ್ತೇವೆ. ಅವರ ರಾಜೀನಾಮೆ ಅಂಗೀಕಾರ ಆಗುವವರೆಗೂ ಬೇರೆ ಹೆಸರುಗಳ ಬಗ್ಗೆ ಚರ್ಚೆ ಮಾಡುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕೊಡಗು ಸಂತ್ರಸ್ತರಿಗೆ ನಿರ್ಮಿಸುತ್ತಿರೋ ಮನೆಗಳು ಚೆನ್ನಾಗಿಲ್ಲ: ಹರ್ಷಿಕಾ ಪೂಣಚ್ಚನಿಖಿಲ್ ಜೆಡಿಎಸ್ ರಾಜ್ಯಾಧ್ಯಕ್ಷರ ರೇಸ್ ನಲ್ಲಿ ಇಲ್ಲ. ಯಾರ್ಯಾರೋ ಏನೇನೋ ಮಾತನಾಡುತ್ತಿದ್ದಾರೆ. ನಿಖಿಲ್ ಅವರನ್ನು ಜೆಡಿಎಸ್ ಯುವ ಘಟಕ ಸ್ಥಾನಕ್ಕೆ ಕೆಲವರು ಪ್ರಸ್ತಾಪ ಮಾಡಿದ್ದಾರೆ. ಈ ಬಗ್ಗೆ ಚರ್ಚೆ ಮಾಡಬೇಕು ಎಂದು ಹೇಳಿದ್ದಾರೆ.Sign in to your account
Username or Email Address


Password

 Remember Me


