ಹುಬ್ಬಳ್ಳಿ/ಧಾರವಾಡ: ಮಂಡ್ಯ ನೂತನ ಸಂಸದೆ ಸುಮಲತಾ ಅಂಬರೀಶ್ ಅವರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ‘ನಿಖಿಲ್ ಎಲ್ಲಿದ್ದೀಯಪ್ಪಾ’ ಎಂದು ಕೂಗಿದ್ದಾರೆ.ಹುಬ್ಬಳ್ಳಿಯ ಖಾಸಗಿ ಕಾಲೇಜ್‍ನಲ್ಲಿ ಅಮರ್ ಚಿತ್ರ ತಂಡದ ಸಂವಾದ ಕಾರ್ಯಕ್ರಮ ನಡೆಯುತ್ತಿದೆ. ಈ ಸಂವಾದ ಕಾರ್ಯಕ್ರಮಕ್ಕೆ ಸುಮಲತಾ ಅವರು ವೇದಿಕೆ ಮೇಲೆ ಆಗಮಿಸುತ್ತಾರೆ. ಈ ವೇಳೆ ಸುಮಲತಾ ಅವರು ವೇದಿಕೆಯ ಮೇಲೆ ಬರುತ್ತಿದ್ದಂತೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳೆಲ್ಲರೂ ‘ನಿಖಿಲ್ ಎಲ್ಲಿದ್ದೀಯಪ್ಪ, ‘ನಿಖಿಲ್ ಎಲ್ಲಿದ್ದೀಯಪ್ಪಾ’ ಎಂದು ಜೋರಾಗಿ ಘೋಷಣೆ ಕೂಗಿದ್ದಾರೆ. ಆಗ ಸುಮಲತಾ ಅವರು ವೇದಿಕೆಯ ಮೇಲೆಯೇ ನಕ್ಕಿದ್ದಾರೆ.ವಿಧ್ಯಾರ್ಥಿಗಳು ‘ನಿಖಿಲ್ ಎಲ್ಲಿದಿಯಪ್ಪಾ’ ಎಂದು ಕೂಗುತ್ತಿದ್ದಂತೆ ಅಭಿಷೇಕ್ ಅವರು, ಯಾರಾದ್ರು ಎಲ್ಲಾದರೂ ಹೋಗಲಿ ನಾವು ಇಲ್ಲಿದ್ದೀವಿ. ಅದನ್ನ ಬಿಟ್ಟು ಬಿಡಿ ಎಂದು ಹೇಳಿದ್ದಾರೆ. ಇಂದು ಅಭಿಷೇಕ್ ಅಭಿನಯದ ‘ಅಮರ್’ ಚಿತ್ರ ಪ್ರಚಾರಕ್ಕಾಗಿ ಚಿತ್ರತಂಡ ಅವಳಿ ನಗರಕ್ಕೆ ಆಗಮಿಸಿದೆ. ಸುಮಲತಾರಿಗೆ ಪುತ್ರ ಅಭಿಷೇಕ್, ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಮತ್ತು ಅಮರ್ ಚಿತ್ರ ನಿರ್ದೇಶಕ ನಾಗಶೇಖರ್ ಸಾಥ್ ನೀಡಿದ್ದಾರೆ.ಅಷ್ಟೇ ಅಲ್ಲದೇ ಇಂದು ಬೆಳಗ್ಗೆ ಧಾರವಾಡ ಹೊರವಲಯದ ನುಗ್ಗಿಕೇರೆ ಹನುಮಂತ ದೇವಸ್ಥಾನದಲ್ಲಿ ತುಪ್ಪ ಮತ್ತು ಹಾಲಿನ ತುಲಾಭಾರ ಮಾಡಿಸಿದ್ದಾರೆ. ಸುಮಲತಾ ಅವರಿಗೆ 75 ಕೆಜಿ ಸಕ್ಕರೆ, 15 ಕೆಜಿ ತುಪ್ಪದಿಂದ ತುಲಾಭಾರ ಮಾಡಿದ್ದು, ಅಭಿಷೇಕ್ ಅವರಿಗೆ 100 ಕೆಜಿ ಸಕ್ಕರೆ, 15 ಕೆಜಿ ತುಪ್ಪದಲ್ಲಿ ತುಲಾಭಾರ ಮಾಡಿಸಲಾಗಿದೆ. ಅಭಿಮಾನಿ ನಾರಾಯಣ್ ಕಲಾಲ್ ಅಪೇಕ್ಷೆ ಮೇರೆಗೆ ಈ ತುಲಾಭಾರ ನಡೆದಿದೆ.Sign in to your account
Username or Email Address


Password

 Remember Me


