ಕೋಲಾರ: ಸಿಎಂ ಕುಮಾರಸ್ವಾಮಿ ಅವರನ್ನು ಕೋಲಾರ ಜಿಲ್ಲೆಗೆ ಕರೆ ತಂದು ಗ್ರಾಮ ವಾಸ್ತವ್ಯ ಮಾಡಿಸುತ್ತೇನೆ ಎಂದು ಪಕ್ಷೇತರ ಶಾಸಕ ಎಚ್.ನಾಗೇಶ್ ಹೇಳಿದ್ದಾರೆ.ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮಾತನಾಡಿದ ಶಾಸಕರು, ಸಿಎಂ ಕುಮಾರಸ್ವಾಮಿ ಅವರು ಕಳೆದ ಒಂದು ವರ್ಷದಲ್ಲಿ ಉತ್ತಮ ಕೆಲಸ, ಆಡಳಿತ ನೀಡಿದ್ದಾರೆ. ಮುಂದಿನ ನಾಲ್ಕು ವರ್ಷಗಳಲ್ಲಿ ಮತ್ತಷ್ಟು ಅಭಿವೃದ್ಧಿಗೆ ಶ್ರಮಿಸುತ್ತಾರೆ. ಅವರು ಕಾರ್ಯವೈಖರಿ ನೋಡಿ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುತ್ತಿರುವೆ ಎಂದರು.ಉತ್ತಮ ಆಡಳಿತ ನೀಡಲು ಸಿಎಂ ಕುಮಾರಸ್ವಾಮಿ ಅವರಿಗೆ ನೆಮ್ಮದಿ ಬೇಕು. ಈ ನಿಟ್ಟಿನಲ್ಲಿ ಸಚಿವರು, ಶಾಸಕರು ಸಹಕಾರ ನೀಡಬೇಕಿದೆ. ನಮ್ಮ ಕ್ಷೇತ್ರದ ಅಭಿವೃದ್ಧಿ ಉದ್ದೇಶದಿಂದ ನಾನು ಕೂಡ ಕುಮಾರಸ್ವಾಮಿ ಅವರ ಕೈಯನ್ನು ಬಲಪಡಿಸುತ್ತಿರುವೆ ಎಂದು ಹೇಳಿದರು.ನನಗೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದು, ಬುಧವಾರದವರೆಗೂ ಕಾಯುವಂತೆ ತಿಳಿಸಿದ್ದಾರೆ. ಅವರು ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಹೀಗಾಗಿ ಸುಭದ್ರ ಸರ್ಕಾರಕ್ಕೆ ನಮ್ಮ ಬೆಂಬಲ ಇದೆ. ಸಚಿವ ಸ್ಥಾನ ಸಿಕ್ಕರೆ ಖುಷಿಯಾಗುತ್ತದೆ. ಮಂತ್ರಿಗಿರಿ ಇದ್ದರೆ ಜಿಲ್ಲೆಯ ಅಭಿವೃದ್ಧಿ ಕೆಲಸ ಮಾಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.Sign in to your account
Username or Email Address


Password

 Remember Me


