ಮಂಗಳೂರು: ಈದ್ ಮಿಲಾದ್ (Eid Milad) ಹಿನ್ನೆಲೆ ಮುಸ್ಲಿಂ ಯುವಕರಿಗೆ ಬೈಕ್ ರ‍್ಯಾಲಿಗೆ ಪೊಲೀಸರು ಅನುಮತಿ ನೀಡಿದ ಬಳಿಕ ಬಿ.ಸಿ.ರೋಡ್‌ನಲ್ಲಿ (BC Road) ಮತ್ತೆ ಉದ್ವಿಗ್ನ ಪರಿಸ್ಥಿತಿ ಎದುರಾಗಿದ್ದು, ಮದ್ಯದಂಗಡಿ ಬಂದ್ ಮಾಡುವುದಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಗಿಲನ್ (Mullai Muhilan) ಆದೇಶ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ದ.ಕ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದೆ.ಬಂಟ್ವಾಳ (Bantwal) ಪುರಸಭಾ ವ್ಯಾಪ್ತಿಯಲ್ಲಿ 48 ಗಂಟೆಗಳ ಕಾಲ ಮದ್ಯದಂಗಡಿ, ಶೇಂದಿ ಮಾರಾಟದ ಅಂಗಡಿಗಳ ಬಾಗಿಲು ಮುಚ್ಚುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು, ಅಂಗಡಿಗಳ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಮೊಹರು ಬಿದ್ದಿದೆ. ಇದನ್ನೂ ಓದಿ: ಮಂಗಳವಾರ ಸಚಿವ ಸಂಪುಟ ಸಭೆ – ಇಂದೇ ಕಲಬುರಗಿ ತಲುಪಿದ ಸಿಎಂಬಜರಂಗದಳ ಹಾಗೂ ವಿಹೆಚ್‌ಪಿಯಿಂದ (VHP) ಬಿ.ಸಿ ರೋಡ್ ಚಲೋ ಕರೆ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ಜಮಾಯಿಸಿದ್ದರು. ಬಜರಂಗದಳ ಹಾಗೂ ವಿಹೆಚ್‌ಪಿಯ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆದಿತ್ತು. ಪೊಲೀಸರು ಬಿಗಿ ಬಂದೋಬಸ್ತ್ನಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಗೊಳಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಇದೀಗ ಮುಸ್ಲಿಂ ಯುವಕರ ಬೈಕ್ ರ‍್ಯಾಲಿಗೆ ಅನುಮತಿ ನೀಡಿದ್ದು, ಬೈಕ್ ರ‍್ಯಾಲಿ ವೇಳೆ ಮುಸ್ಲಿಂ ಯುವಕರು ಹಸಿರು ಬಾವುಟ ಹಾರಿಸಿರುವುದು ತ್ರೀವ ಆಕ್ರೋಶ ಉಂಟಾಗಿದೆ. ಮತ್ತೆ ಉದ್ವಿಗ್ನ ಪರಿಸ್ಥಿತಿ ತಲುಪಿದೆ. ಇದನ್ನೂ ಓದಿ: ಈದ್ ಮಿಲಾದ್ ಹೊತ್ತಲ್ಲೇ ರಾಜ್ಯದಲ್ಲಿ ಪ್ಯಾಲೆಸ್ತೀನ್ ಪ್ರೇಮ – ಚಿಕ್ಕಮಗಳೂರಲ್ಲಿ ಬಾವುಟ; 6 ಮಂದಿ ವಿರುದ್ಧ ಕೇಸ್ಉದ್ವಿಗ್ನಗೊಂಡಿದ್ದು ಯಾಕೆ?
ನಾಗಮಂಗಲ (Nagamangala) ಗಲಭೆ ಖಂಡಿಸಿ ಸೆ.12ರಂದು ಮಂಗಳೂರಿನಲ್ಲಿ (Mangaluru) ನಡೆದಿದ್ದ ಪ್ರತಿಭಟನಾ ಭಾಷಣದಲ್ಲಿ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್, ಸರ್ಕಾರ ಈದ್ ಮಿಲಾದ್ ಮೆರವಣಿಗೆ ತಡೆಯಬೇಕು. ಇಲ್ಲದಿದ್ದಲ್ಲಿ ಮತ್ತೆ ಇವರು ಗಲಭೆ ನಡೆಸ್ತಾರೆ ಎಂದಿದ್ದರು. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ್ದ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಮಹಮ್ಮದ್ ಶರೀಫ್ ಹಾಗೂ ಆತನ ಸಹೋದರ ಹಸೀನಾರ್ ತಾಕತ್ ಇದ್ದರೆ ಸೋಮವಾರ ಬಿಸಿ ರೋಡ್‌ನ ಈದ್ ಮಿಲಾದ್ ಮೆರವಣಿಗೆಗೆ ಬನ್ನಿ ಅಂತ ಶರಣ್ ಪಂಪ್ ವೆಲ್‌ಗೆ ಸವಾಲ್ ಹಾಕಿ ಆಡಿಯೋ ಹರಿಯ ಬಿಟ್ಟಿದ್ದರು. ಆಡಿಯೋ ಹರಿ ಬಿಟ್ಟಿದ್ದ ಇಬ್ಬರ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಸವಾಲು ಸ್ವೀಕರಿಸಿದ ಬಜರಂಗದಳ-ವಿಎಚ್‌ಪಿ ಇವತ್ತು ಬಿ.ಸಿ.ರೋಡ್ ಚಲೋ ಕರೆ ನೀಡಿತ್ತು. ಇದನ್ನೂ ಓದಿ: ವಿಶ್ವದ ಮೊದಲ ಖಾಸಗಿ ಬಾಹ್ಯಕಾಶ ನಡಿಗೆ ಯಶಸ್ವಿ – ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್Sign in to your account
Username or Email Address


Password

 Remember Me


