ಚಿತ್ರದುರ್ಗ: ಕಮಲದಲ್ಲಿ ‘ಮಲ’ವೂ ಇದೆ, ಕಮಲವು ಇದೆ ಎಂದು ಚಿತ್ರದುರ್ಗದಲ್ಲಿ ಸಾಹಿತಿ ಕುಂ. ವೀರಭದ್ರಪ್ಪ ಹೇಳಿಕೆ ನೀಡಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ಸಂವಿಧಾನವನ್ನು ದೊಡ್ಡ ಮಟ್ಟದಲ್ಲಿ ವಿರೋಧಿಸಿದ ಬಾಯಿಬಡುಕರು ಈಗ ಸಂಸದರಾಗಿದ್ದಾರೆ. ಇದು ಪ್ರಜಾಪ್ರಭುತ್ವದ ವೇಷದಲ್ಲಿ ಸರ್ವಾಧಿಕಾರಿ ಶಕ್ತಿಗಳು ಪ್ರವೇಶ ಮಾಡುತ್ತಿದೆ. ಒಂದಾನೊಂದು ಕಾಲದಲ್ಲಿ ನನಗೆ ಕಮಲದ ಮೇಲೆ ಗೌರವ ಇತ್ತು. ಕಮಲದಲ್ಲಿ ಎರಡು ಪದ ಇದೆ. ಒಂದು ಕಮಲದಲ್ಲಿ ‘ಮಲ’ವೂ ಇದೆ, ಕಮಲವು ಇದೆ ಎಂದು ಹೇಳಿ ವ್ಯಂಗ್ಯವಾಡಿದರು.ಈಗ ಮಲಬದ್ಧತೆ ಆದರೆ ದೇಹದ ಆರೋಗ್ಯ ಹಾಳಾಗುತ್ತದೆ. ಹಾಗೆಯೇ ಕಮಲ ಒಂದು ದೇಶಕ್ಕೆ ಅಪಾಯವಾಗಲಿದೆ. ಅಲ್ಲದೆ ಮಲಬದ್ಧತೆಯಿಂದ ದೇಹದ ಆರೋಗ್ಯ ನಾಶವಾಗುತ್ತೋ, ದೇಹದ ಸಮತೋಲನ ಏರುಪೇರಾಗುತ್ತಾದೋ ಹಾಗೆಯೇ ಕಮಲದಿಂದ ಒಂದು ದೇಶದ ಆಡಳಿತ ವ್ಯವಸ್ಥೆ ಹಾಳಾಗುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ನಮ್ಮ ಪ್ರಾದೇಶಿಕ ಭಾಷೆಗಳು ಬಹಳ ಅಭದ್ರ ಸ್ಥಿತಿಯಲ್ಲಿ ಇದೆ. ಇಲ್ಲಿ ಕನ್ನಡ ಇದೆ, ಕರ್ನಾಟಕದಲ್ಲಿ ಅಸ್ಮಿತೆಯನ್ನು ನಾವು ಕಾಪಾಡಬೇಕು. ಆದರೆ ಈ ಪ್ರಾದೇಶಿಕ ಭಾಷೆಗಳ ಅಸ್ಮಿತೆಯನ್ನು ಧಕ್ಕೆ ತರುವಂತಹ ಒಂದು ವಾತಾವರಣವನ್ನು ಹಿಂದಿ ಭಾಷೆಯನ್ನು ಹೇರುವ ಮೂಲಕ ಕೇಂದ್ರ ಸರ್ಕಾರ ನಿರ್ಮಾಣ ಮಾಡುತ್ತಿದೆ ಎಂದು ದೂರಿದರು.Sign in to your account
Username or Email Address


Password

 Remember Me


