ಬೆಂಗಳೂರು: ಮೋದಿ ಸಚಿವ ಸಂಪುಟದ ಖಾತೆಗಳು ಹಂಚಿಕೆಯಾಗಿದ್ದು, ಕರ್ನಾಟಕದ ಮೂವರು ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ.ಸದಾನಂದ ಗೌಡರಿಗೆ ರಸಗೊಬ್ಬರ ಖಾತೆಯನ್ನು ನೀಡಲಾಗಿದೆ. ಪ್ರಹ್ಲಾದ್ ಜೋಶಿ ಅವರಿಗೆ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿಗಾರಿಕೆ ಖಾತೆಯನ್ನು ನೀಡಲಾಗಿದೆ. ಸುರೇಶ್ ಅಂಗಡಿ ಅವರನ್ನು ರಾಜ್ಯ ರೈಲ್ವೇ ಖಾತೆ ಸಚಿವರನ್ನಾಗಿ ನೇಮಕ ಮಾಡಲಾಗಿದೆ.ಅನಂತ್ ಕುಮಾರ್ ಅವರು ನಿಭಾಯಿಸುತ್ತಿದ್ದ ಎರಡೂ ಖಾತೆಗಳು ಕರ್ನಾಟಕದ ಪಾಲಾಗಿದೆ. ಜೋಶಿ, ಸುರೇಶ್ ಅಂಗಡಿ ಹಾಗೂ ಡಿವಿಎಸ್ ನಿನ್ನೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.ಕರ್ನಾಟಕದಿಂದ ರಾಜ್ಯಸಭೆಗೆ ಅಯ್ಕೆಯಾದ ನಿರ್ಮಲಾ ಸೀತಾರಾಮನ್ ಅವರಿಗೆ ಹಣಕಾಸು ಖಾತೆ ನೀಡಲಾಗಿದೆ. ಈ ಹಿಂದೆ ಅನಂತ್ ಕುಮಾರ್ ರಾಸಾಯನಿಕ ರಸಗೊಬ್ಬರ ಮತ್ತು ಸಂಸದೀಯ ವ್ಯವಹಾರಗಳ ಖಾತೆಯನ್ನು ನಿರ್ವಹಿಸಿದ್ದರು.Sign in to your account
Username or Email Address


Password

 Remember Me


