ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಪದಗ್ರಹಣ ಸಮಾರಂಭದ ಹಿನ್ನೆಲೆಯಲ್ಲಿ ಕೋಟೆನಾಡು ಚಿತ್ರದುರ್ಗದಲ್ಲಿ ಅಭಿಮಾನಿಗಳು ರಂಗೋಲಿ ಮೂಲಕ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ.ಕಲಿಯುಗದ ಶ್ರೀ ರಾಮಚಂದ್ರನ ಪಟ್ಟಾಭಿಷೇಕ ಎಂದು ಮಹಿಳೆಯರು ರಂಗೋಲಿಯಲ್ಲಿ ಬರೆದಿದ್ದಾರೆ. ಅರಳಿದ ಕಮಲ, ಮೋದಿ, ಶ್ರೀರಾಮ ಹಾಗು ರಾಷ್ಟ್ರ ಧ್ವಜವನ್ನು ರಂಗೋಲಿಯಲ್ಲಿ ಬಿಡಿಸಿದ್ದಾರೆ. ಭಾರತಕ್ಕೆ ಮತ್ತೊಮ್ಮೆ ರಾಮ ರಾಜ್ಯದ ಭಾಗ್ಯ ಸಿಗಲಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 2ನೇ ಬಾರಿಗೆ ಮೋದಿ ಪ್ರಮಾಣ ವಚನ- ಅಭಿಮಾನಿಯಿಂದ ಪ್ರತಿಮೆ ವಿತರಣೆಚಿತ್ರದುರ್ಗದ ಐಯುಡಿಪಿ ಬಡಾವಣೆಯ ಶೋಭ ಅವರು ವಿನೂತನವಾಗಿ ರಂಗೋಲಿ ಹಾಕಿ, ವ್ಯಾಯಾಮ ಶಾಲೆಯಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ಶೋಭಾ ಅಲ್ಲದೆ ಮೋದಿ ಅಭಿಮಾನಿಗಳು ಕೂಡ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.ಸದ್ಯ ದೇಶದ ಪ್ರಧಾನಿಯಾಗಿ ಮತ್ತೆ ಅಧಿಕಾರ ಸ್ವೀಕಾರ ಮಾಡುತ್ತಿರುವ ನರೇಂದ್ರ ಮೋದಿ ಅವರಿಗೆ ಜನರು ತಮ್ಮದೇ ಶೈಲಿಯಲ್ಲಿ ಮೋದಿಗೆ ತಮ್ಮ ಪ್ರೀತಿಯನ್ನ ವ್ಯಕ್ತಪಡಿಸಿ ಶುಭಾಶಯ ತಿಳಿಸುತ್ತಿದ್ದಾರೆ.Sign in to your account
Username or Email Address


Password

 Remember Me


