ಹಾಸನ: ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರನ್ನು ವರ್ಗಾವಣೆ ಮಾಡಲಾಗಿದೆ.ಹಾಸನ ಜಿಲ್ಲೆಯಲ್ಲಿ ಈ ಹಿಂದೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಅಕ್ರಂ ಪಾಷಾ ಅವರು ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಂ ಪಾಷಾ ಅವರನ್ನು ಗ್ರಾಮೀಣಾಭಿವೃದ್ಧಿ ಇಲಾಖೆಗೆ ವರ್ಗಾವಣೆ ಮಾಡಲಾಗಿತ್ತು. ಆಗ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರನ್ನು ಹಾನಸ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿತ್ತು. ಈ ಹಿಂದೆ ಬೆಂಗಳೂರು ಪ್ರವಾಸೋದ್ಯಮ ಇಲಾಖೆಯಲ್ಲಿ ನಿರ್ದೇಶಕರಾಗಿ ಪ್ರಿಯಾಂಕಾ ಮೇರಿ ಕಾರ್ಯನಿರ್ವಹಿಸಿದ್ದರು.ಇದೀಗ ಮತ್ತೊಮ್ಮೆ ಹಾಸನ ಜಿಲ್ಲಾಧಿಕಾರಿಯಾಗಿ ಅಕ್ರಂಪಾಷಾ ಬಂದಿದ್ದಾರೆ. ಈ ಹಿಂದೆ ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಚುನಾವಣಾ ಮಾರ್ಗಸೂಚಿ ಪಾಲಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿತ್ತು. ರೋಹಿಣಿ ಸಿಂಧೂರಿ ಅವರವನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಬಳಿಕ ರೋಹಿಣಿ ಸಿಂಧೂರಿ ಅವರ ವರ್ಗಾವಣೆಯಿಂದ ತೆರವಾಗಿದ್ದ ಜಿಲ್ಲಾಧಿಕಾರಿ ಸ್ಥಾನಕ್ಕೆ ಅಕ್ರಂ ಪಾಷಾ ಅವರನ್ನು ನೇಮಿಸಲಾಗಿತ್ತು.ಅಕ್ರಂಪಾಷಾ ಅವರು ಫೆಬ್ರವರಿ 22 ರಂದು ಹಾಸನಕ್ಕೆ ವರ್ಗಗೊಂಡು ಆಗಮಿಸಿದ್ದರು. ಆದರೆ ಒಂದು ತಿಂಗಳ ಅವಧಿಯಲ್ಲೇ ಪಾಷಾರನ್ನು ಕೂಡ ಗ್ರಾಮೀಣಾಭಿವೃದ್ಧಿ ಇಲಾಖೆಗೆ ವರ್ಗಾವಣೆ ಮಾಡಲಾಗಿತ್ತು.ವರ್ಗಾವಣೆಗೆ ಕಾರಣವೇನು?
ಬಿಜೆಪಿ ಶಾಸಕ ಪ್ರೀತಂಗೌಡ ಚುನಾವಣಾ ಆಯೋಗಕ್ಕೆ ದೂರು ನೀಡಿ ಡಿಸಿ ಅವರನ್ನು ಬದಲಾವಣೆ ಮಾಡುವಂತೆ ಮನವಿ ಮಾಡಿದ್ದರು. ಈ ದೂರನ್ನು ಆಯೋಗ ಗಂಭೀರವಾಗಿ ಪರಿಗಣಿಸಿ ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿತ್ತು.Sign in to your account
Username or Email Address


Password

 Remember Me


