ಬೆಂಗಳೂರು: ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಪ್ರಚಂಡ ಬಹುಮತಗಳ ಅಂತರದಿಂದ ಗೆಲುವು ದಾಖಲಿಸಿದ್ದರು. ಮುಂದೆ ಸುಮಲತಾ ಅಂಬರೀಶ್ ಅವರ ಮುಂದಿನ ನಡೆ ಏನು ಎಂಬುದರ ಬಗ್ಗೆ ಜನರಲ್ಲಿ ಕುತೂಹಲ ಮೂಡಿಸಿದೆ. ಸದ್ಯಕ್ಕೆ ಬಿಜೆಪಿ ಸೇರ್ಪಡೆಯ ಬಗ್ಗೆ ಚಿಂತಿಸಿಲ್ಲ. ಮುಂದಿನ ದಿನಗಳಲ್ಲಿ ಮಂಡ್ಯ ಜನತೆಯೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ.ಗೆಲುವಿನ ಬಳಿಕ ಸುಮಲತಾ ಅಂಬರೀಶ್ ಚುನಾವಣೆಯಲ್ಲಿ ತಮಗೆ ಬೆಂಬಲ ನೀಡಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರನ್ನು ಇಂದು ಭೇಟಿಯಾಗಲಿದ್ದಾರೆ. ಕೇವಲ ಧನ್ಯವಾದ ತಿಳಿಸಲು ನಾಯಕರನ್ನು ಭೇಟಿಯಾಗುತ್ತಿದ್ದಾರೆ ಎಂದು ಸುಮಲತಾ ಆಪ್ತ ಮೂಲಗಳು ತಿಳಿಸಿವೆ.ಸುಮಲತಾರ ಭೇಟಿಯ ಉದ್ದೇಶವೇನು? ಮುಂದಿನ ದಿನಗಳಲ್ಲಿ ಬಿಜೆಪಿ ಸೇರ್ತಾರಾ ಎಂಬಿತ್ಯಾದಿ ಪ್ರಶ್ನೆಗಳು ಹುಟ್ಟಿಕೊಂಡಿವೆ. ಒಂದು ವೇಳೆ ಪಕ್ಷ ಸೇರ್ಪಡೆಯಾಗದಿದ್ದರೂ ಬಾಹ್ಯ ಬೆಂಬಲ ನೀಡಿ ಸಚಿವ ಸ್ಥಾನ ಪಡೆಯುತ್ತಾರಾ ಎಂಬ ಚರ್ಚೆಗಳು ರಾಜಕೀಯ ಅಂಗಳದಲ್ಲಿ ಹುಟ್ಟಿಕೊಂಡಿವೆ.Sign in to your account
Username or Email Address


Password

 Remember Me


