ತುಮಕೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪರ್ಫಾರಮೆನ್ಸ್ ಕಡಿಮೆ ಆಗಿದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸ್ವಾಭಾವಿಕವಾಗಿ ಬೇಸರವಾಗಿದೆ ಎಂದು ಉಪಮಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಸೀಟ್ ಕಡಿಮೆ ಆಗಿದೆ ಎಂದು ಸ್ವಾಭಾವಿಕವಾಗಿ ರಾಹುಲ್ ಗಾಂಧಿ ಅವರಿಗೆ ಬೇಸರ ಆಗಿರಬಹುದು. ಇವತ್ತು ವರ್ಕಿಂಗ್ ಕಮೀಟಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ನಮಗೆ ಗೊತ್ತಿಲ್ಲ ಎಂದು ಹೇಳಿದರು.ಇದೇ ವೇಳೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಸೋಲಿನ ಹೊಣೆಯನ್ನು ಜೆಡಿಎಸ್ -ಕಾಂಗ್ರೆಸ್ ಎಲ್ಲ ನಾಯಕರು ಹೊರುತ್ತೇವೆ. ನಮ್ಮ ಮೈತ್ರಿ ಸರ್ಕಾರ ಸ್ಥಿರವಾಗಿದೆ. ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷದಲ್ಲೇ ಇರುತ್ತಾರೆ. ಅವರ ಬಗ್ಗೆ ನನಗೆ ವಿಶ್ವಾಸವಿದೆ. ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದು ಯಾರೋ ಕನಸು ಕಂಡಿರಬೇಕು. ಸಿಎಂ ಕುಮಾರಸ್ವಾಮಿ ರಾಜೀನಾಮೆ ಕೊಡದಂತೆ ನಾವೆಲ್ಲಾ ಮನವರಿಕೆ ಮಾಡಿದ್ದು, ಸರ್ಕಾರ ಸುಭದ್ರವಾಗಿದೆ. ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು.ತುಮಕೂರಿನಲ್ಲಿ ರಸ್ತೆಗಳಲ್ಲಿ ಅಂಟಿಸಲಾಗಿರುವ ‘ಪರಮೇಶ್ವರ್ ಹಠಾವೋ ಕಾಂಗ್ರೆಸ್ ಬಚಾವೋ’ ಎಂಬ ಪೋಸ್ಟ್ ಕುರಿತು ಪ್ರತಿಕ್ರಿಯೆ ನೀಡಲು ಡಿಸಿಎಂ ಹಿಂದೇಟು ಹಾಕಿದರು.Sign in to your account
Username or Email Address


Password

 Remember Me


