ಬೆಂಗಳೂರು: ಲೋಕಸಭಾ ಚುನಾವಣೆಯ ಜೊತೆಗೆ ಉಪಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಾಕ್ ಉಂಟಾಗಿದೆ.ಚಿಂಚೋಳಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ 8,002 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ರಾಠೋಡ್ 61,079 ಪಡೆದಿದ್ದರೆ, ಅವಿನಾಶ್ ಜಾಧವ್ 69,109 ಮತಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಉಪಚುನಾವಣೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ್‍ಗೆ ಸೋಲಾಗಿದೆ.ಕುಂದಗೋಳ ವಿಧಾನಸಭಾ ಉಪಚುನಾವಣೆ ಶಿವಳ್ಳಿ ನಿಧನದಿಂದ ಅವರ ಪತ್ನಿ ಕುಸುಮಾವತಿ ಶಿವಳ್ಳಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಬಿಜೆಪಿಯಿಂದ ಎಸ್.ಐ ಚಿಕ್ಕನಗೌಡರು ಸ್ಪರ್ಧೆಗಿಳಿದಿದ್ದರು. ಆದರೆ ಚುನಾವಣೆಯ ಫಲಿತಾಂಶದಲ್ಲಿ ಕುಸುಮಾವತಿ ಶಿವಳ್ಳಿ ಅವರು 77640 ಮತಗಳನ್ನು ಪಡೆದಿದ್ದರೆ, ಚಿಕ್ಕನಗೌಡರು 76039 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಕುಸುಮಾವತಿ ಶಿವಳ್ಳಿ 1601 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.ಉಮೇಶ್ ಜಾಧವ್ ರಾಜೀನಾಮೆ ಕೊಟ್ಟಿದ್ದಕ್ಕೆ ಚಿಂಚೋಳಿಯಲ್ಲಿ ಉಪಚುನಾವಣೆ ನಡೆದಿದೆ. ಇತ್ತ ಕುಂದಗೋಳದಲ್ಲಿ ಶಿವಳ್ಳಿ ಅವರು ನಿಧನದಿಂದ ಉಪಚುನಾವಣೆ ನಡೆದಿದೆ. ಎರಡೂ ಕ್ಷೇತ್ರದಲ್ಲಿ ಬಿಜೆಪಿ ಒಂದು ಕ್ಷೇತ್ರವನ್ನು ಗೆದ್ದುಕೊಂಡಿದೆ. ಆಪರೇಷನ್ ಕಮಲಕ್ಕೆ ಕಾಂಗ್ರೆಸ್ ಚಿಂಚೋಳಿ ಕ್ಷೇತ್ರವನ್ನು ಕಳೆದುಕೊಂಡಿದೆ ಎಂದು ಹೇಳಾಗುತ್ತಿದೆ.Sign in to your account
Username or Email Address


Password

 Remember Me


