ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರು ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಮಂಡ್ಯದಲ್ಲಿ ಜಯಭೇರಿ ಹಿನ್ನೆಲೆ ಅಂಬರೀಶ್ ಸಮಾಧಿಗೆ ನಮನ ಸಲ್ಲಿಸಲಿದ್ದಾರೆ.ಅಂಬರೀಶ್ ಅವರು ನಮ್ಮನ್ನ ಅಗಲಿ ಇಂದಿಗೆ 6 ತಿಂಗಳುಗಳೇ ಕಳೆದಿದೆ. ಈ ಹಿನ್ನೆಲೆಯಲ್ಲಿ 6 ನೇ ತಿಂಗಳ ಪುಣ್ಯ ತಿಥಿ ಕೂಡ ಆಚರಣೆ ಮಾಡಲಿದ್ದಾರೆ. ಇಂದು ಬೆಳ್ಳಗ್ಗೆ 10 ಗಂಟೆ ಸುಮಾರಿಗೆ ಕಂಠೀರವ ಸ್ಟುಡಿಯೋದಲ್ಲಿ ಇರುವ ಅಂಬರೀಶ್ ಸಮಾಧಿಗೆ ಸುಮಲತಾ ಮತ್ತು ಅಭಿಷೇಕ್ ಭೇಟಿ ನೀಡಲಿದ್ದಾರೆ.ಇಂದು ನಡೆಯುವ ಪೂಜೆಗೆ ಮಧ್ಯರಾತ್ರಿಯಿಂದಲೇ ಪೂರ್ವ ಸಿದ್ಧತೆ ನಡೆಯುತ್ತಿದ್ದು, ಅಂಬರೀಶ್ ಸಮಾಧಿಗೆ ಪುಪ್ಪಲಂಕಾರವನ್ನು ಮಾಡುತ್ತಿದ್ದರು. ಮಂಡ್ಯದ ಗೆಲುವಿನ ಸಂಭ್ರಮ ಮತ್ತು ಅಂಬಿಯ 6ನೇ ತಿಂಗಳಿನ ಪುಣ್ಯ ತಿಥಿ ಒಟ್ಟೊಟ್ಟಾಗಿ ಬಂದಿದ್ದು ಸಮಾಧಿಗೆ ಭೇಟಿ ನೀಡಿ ಪೂಜೆಯನ್ನು ನೇರವೆರಿಸಲಿದ್ದಾರೆ. ಪೂಜೆ ಕಾರ್ಯಕ್ರಮದಲ್ಲಿ ದರ್ಶನ್ ಮತ್ತು ಯಶ್ ಭಾಗಿಯಾಗುವ ಸಾಧ್ಯತೆಗಳಿವೆ.ಕಿಡ್ನಿ ಹಾಗೂ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅಂಬರೀಶ್ ಅವರು 2018ರ ನವೆಂಬರ್ 24ರಂದು ರಾತ್ರಿ ನಿಧನರಾಗಿದ್ದರು. ಅಂದೇ ಮಂಡ್ಯದ ಕನಗನಮರಡಿಯಲ್ಲಿ ಬಸ್ ದುರಂತ ನಡೆದಿದ್ದು, ಘಟನೆ ನೋಡಿ ಬೇಸರಗೊಂಡಿದ್ದ ಅಂಬರೀಶ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗೆಂದು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.ಚುನಾವಣೆಯಲ್ಲಿ ಜಯ:
ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯದಲ್ಲಿ ನಡೆದ ಸ್ವಾಭಿಮಾನಿ ವರ್ಸಸ್ ಸರ್ಕಾರದ ನಡುವಿನ ಸಮರದಲ್ಲಿ ಸುಮಲತಾ ಅವರು ಭರ್ಜರಿ ಗೆಲುವು ಪಡೆದಿದ್ದಾರೆ. ಚುನಾವಣೆಯಲ್ಲಿ ನಿಖಿಲ್ ಅವರಿಗೆ 5,71,777 ಮತ ಲಭಿಸಿದ್ದರೆ, ಸುಮಲತಾ ಅವರಿಗೆ 6,98,213 ಮತ ಲಭಿಸಿದೆ. ಆ ಮೂಲಕ ಸುಮಲತಾ ಅವರು ಬರೋಬ್ಬರಿ 1,26,436 ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ.Sign in to your account
Username or Email Address


Password

 Remember Me


