ಬೆಂಗಳೂರು: ದೇಶದಲ್ಲೇ ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿದ್ದ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ತನ್ನನ್ನು ಗೆಲ್ಲಿಸಿದ ಕ್ಷೇತ್ರದ ಜನತೆಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಚುನಾವಣೆಯ ಫಲಿತಾಂಶದ ಬಗ್ಗೆ ಸುಮಲತಾ ಅಂಬರೀಶ್ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ. “ಯಾರು ಯಾರಿಗೆ ಅಭಿನಂದನೆಗಳನ್ನು ಹೇಳಲಿ. ನನ್ನ ಗೆಲುವಿಗಾಗಿ ಮಂಡ್ಯದ ಜನತೆ ಮಾತ್ರವಲ್ಲದೇ ರಾಜ್ಯದ ಜನತೆಯೂ  ಹಾರೈಸಿದ್ದಾರೆ” ಎಂದು ಪೋಸ್ಟ್ ಮಾಡಿದ್ದಾರೆ.ಮತ್ತೊಂದು ಪೋಸ್ಟ್ ಮಾಡಿದ್ದ, “ಮಂಡ್ಯದ ಜನತೆ ಪ್ರಜಾಪ್ರಭುತ್ವದ ಕಿರೀಟವನ್ನು ಎತ್ತಿ ಹಿಡಿದಿದ್ದಾರೆ. ಹಣಬಲ ತೋಳ್ಬಲ ಎಲ್ಲವನ್ನು ಮೀರಿ, ಜೊತೆಗೆ ಆಮಿಷಗಳನ್ನು ಮೀರಿ ಪ್ರಜಾಪ್ರಭುತ್ವವನ್ನು ಗೆಲ್ಲಿಸಿದಾರೆ. ಕೋಟಿ ಕೋಟಿ ಅನಂತ ಅಭಿನಂದನೆಗಳು ಮಂಡ್ಯದ ಜನತೆಗೆ” ಸುಮಲತಾ ಅಂಬರೀಶ್ ಎಂದು ಜನರಿಗೆ ಕೃತಜ್ಞತೆ ತಿಳಿಸಿದ್ದಾರೆ.Sign in to your account
Username or Email Address


Password

 Remember Me


