ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಜೂನ್ 15ರಿಂದ ಮೋಡ ಬಿತ್ತನೆ ಕಾರ್ಯ ಆರಂಭವಾಗಲಿದೆ ಎಂದು ಕೃಷಿ ಸಚಿವ ಎನ್.ಎಚ್ ಶಿವಶಂಕರರೆಡ್ಡಿ ಹೇಳಿದ್ದಾರೆ.ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ವಾಡಿಕೆಗಿಂತಲೂ ಈ ಬಾರಿ ಕಡಿಮೆ ಮಳೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ತೀವ್ರ ಬರಗಾಲ, ಕುಡಿಯುವ ನೀರಿನ ಸಮಸ್ಯೆ ಹೆಚ್ಚುತ್ತಿದೆ. ಅಂತರ್ಜಲಮಟ್ಟವೂ ಕುಸಿಯುತ್ತಿದ್ದು, ಹಲವು ಕಡೆ ಕೊಳವೆಬಾವಿ ಕೊರೆದರೂ ನೀರು ಸಿಗದೇ ಇರುವ ಪರಿಸ್ಥಿತಿ ಇದೆ. ಮಳೆ ಕೊರತೆಯಿಂದಾಗಿ ದನ ಕರುಗಳಿಗೆ ಮೇವು ಸಿಗುತ್ತಿಲ್ಲ ಎಂದು ತಿಳಿಸಿದರು.ವಿಧಾನಸಭಾ ಚುನಾವಣೆ ಹಿನ್ನೆಲೆ ಕಳೆದ ವರ್ಷ ಮೋಡ ಬಿತ್ತನೆ ಮಾಡಲು ಸಾಧ್ಯವಾಗಲಿಲ್ಲ. ಆದರೆ ಈ ಬಾರಿ ಮೋಡ ಬಿತ್ತನೆಗೆ ಎಲ್ಲಾ ರೀತಿಯ ತಯಾರಿಗಳು ನಡೆದಿವೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಹುಬ್ಬಳ್ಳಿ ಹಾಗೂ ಬೆಂಗಳೂರು ಕೇಂದ್ರಗಳ ಮೂಲಕ ಮೋಡ ಬಿತ್ತನೆ ಕಾರ್ಯವು ಜೂನ್ 15ರಿಂದ ಆರಂಭವಾಗಲಿದೆ ಎಂದರು.ಇದೇ ವೇಳೆ ಸಚಿವರು ಚಿಕ್ಕಬಳ್ಳಾಪುರ ಜಿಲ್ಲೆಯ ಅಧಿಕಾರಿಗಳೊಂದಿಗೆ ಬರ ಸಮಸ್ಯೆಗಳ ಕುರಿತು ಸಭೆ ನಡೆಸಿದರು.Sign in to your account
Username or Email Address


Password

 Remember Me


