ಉಡುಪಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರಾಗಿದ್ದ ದಿನೇಶ್ ಅಮೀನ್ ಮಟ್ಟು ವಿರುದ್ಧ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ. ಕೃಷ್ಣಮಠ, ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಟೀಕಿಸಿದ್ದಾರೆ.ಮಂಗಳೂರಲ್ಲಿ ಮಾತನಾಡಿದ್ದ ಅಮಿನ್ ಮಟ್ಟು ಅವರು, ಕೃಷ್ಣಮಠ ಕೋಮುವಾದದ ಕೇಂದ್ರ. ಪೇಜಾವರ ಸ್ವಾಮೀಜಿ ಅದರ ಮುಖಂಡ ಎಂದು ಹೇಳಿದ್ದರು. ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಕೋಟ ಶ್ರೀನಿವಾಸ ಪೂಜಾರಿ, ಮಟ್ಟು ಹೇಳಿಕೆ ಅತ್ಯಂತ ನೋವಿನ ಸಂಗತಿ. ಪೇಜಾವರ ಸ್ವಾಮೀಜಿ ವಯೋವೃದ್ಧರು, ಜ್ಞಾನ ವಂತರು. ಪೇಜಾವರ ಶ್ರೀಗಳು ಇಫ್ತಾರ್ ಕೂಟ ಮಾಡಿದ್ದರು. ಆಗ ನಿಮ್ಮಂತೆ ಯೋಚಿಸುವವರು ಸ್ವಾಗತಿಸಿರಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.ಅಯೋಧ್ಯೆಯಲ್ಲಿ ರಾಮಮಂದಿರ ಆಗಬೇಕು ಅಂದರೆ ಪೇಜಾವರ ಶ್ರೀ ಕೋಮುವಾದಿ ಹೇಗಾಗ್ತಾರೆ? ಮಠ ಕೋಮುವಾದಿಗಳ ಕೇಂದ್ರ ಎಂದು ಹೇಗೆ ಹೇಳುತ್ತೀರಿ? ಕೃಷ್ಣಮಠ ಹಿಂದೂ ಧರ್ಮದ ಸರ್ವಶ್ರೇಷ್ಟ ದೇವಾಲಯ. ಪೇಜಾವರ ಶ್ರೀ ಬಗ್ಗೆ ಲಘುವಾಗಿ ಮಾತನಾಡುವುದು ಖಂಡನೀಯ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.Sign in to your account
Username or Email Address


Password

 Remember Me


