ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಮತ್ತೆ ಪೊಲೀಸ್ ರಿವಾಲ್ವರ್ ಸದ್ದು ಮಾಡಿದೆ.ಸಿನೀಮೀಯ ರೀತಿಯಲ್ಲಿ ಸರಗಳ್ಳರನ್ನು ಪೊಲೀಸರು ಚೇಸ್ ಮಾಡಿದ್ದಾರೆ. ಉತ್ತರ ವಿಭಾಗದಲ್ಲಿ ಆಕ್ಟೀವ್ ಆಗಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಂದಿನಿ ಲೇಔಟ್, ಬಾಗಲಗುಂಟೆ, ಸೋಲದೇವನಹಳ್ಳಿ ಪೊಲೀಸರು ಬೆಳ್ಳಂಬೆಳಗ್ಗೆ ಕಾರ್ಯಾಚರಣೆಗೆ ಇಳಿದಿದ್ದರು.ಈ ವೇಳೆ ಚೇಸ್ ಮಾಡಿದ ಪೊಲೀಸರ ಮೇಲೆ ಸರಗಳ್ಳರು ಹಲ್ಲೆಗೆ ಮುಂದಾದರು. ಆಗ ತಕ್ಷಣ ಪೊಲೀಸರು ಸುರೇಂದ್ರ ಸಿಂಗ್, ಕರಣ್ ಗುಪ್ತಾ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಸೋಲದೇವನಹಳ್ಳಿಯ ಸಾಸಿವೆಘಟ್ಟ ಬಳಿ ಫೈರಿಂಗ್ ನಡೆದಿದೆ.ಫೈರಿಂಗ್ ನಡೆಸುವ ಮೊದಲು ಪೊಲೀಸರು ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಸಿದರೂ ಆರೋಪಿಗಳು ಕೇಳಲಿಲ್ಲ. ಹೀಗಾಗಿ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹೊಡೆದಿದ್ದಾರೆ.Sign in to your account
Username or Email Address


Password

 Remember Me


