ಹುಬ್ಬಳ್ಳಿ/ ಕಲಬುರಗಿ: ಭಾನುವಾರ ಲೋಕಸಭೆ ಅಂತಿಮ ಹಂತದ ಚುನಾವಣೆ ಜೊತೆಗೆ ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಸಿ.ಎಸ್.ಶಿವಳ್ಳಿ ನಿಧನದಿಂದ ತೆರವಾದ ಕುಂದಗೋಳ, ಉಮೇಶ್ ಜಾಧವ್ ರಾಜೀನಾಮೆಯಿಂದ ಖಾಲಿಯಾದ ಚಿಂಚೋಳಿ ಕ್ಷೇತ್ರಕ್ಕೆ ಭಾನುವಾರ ಮತದಾನ ನಡೆಯಲಿದೆ.ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿ ಕುಸುಮಾ ಶಿವಳ್ಳಿ, ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡರ್ ಸೇರಿದಂತೆ 8 ಜನ ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. 214 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಇದರಲ್ಲಿ ಸೂಕ್ಷ್ಮ 33 ಹಾಗೂ ಅತಿ ಸೂಕ್ಷ್ಮ 38 ಮತದಾನ ಕೇಂದ್ರಗಳನ್ನು ಗುರುತಿಸಲಾಗಿದೆ. ಇದನ್ನೂ ಓದಿ: ಕುಂದಗೋಳ ಉಪ ಕದನ: ಕೈ, ಕಮಲ ಅಭ್ಯರ್ಥಿಗಳ ಪ್ಲಸ್, ಮೈನಸ್ ಏನು? 2018 ಫಲಿತಾಂಶ ಏನಿತ್ತು?ಕುಂದಗೋಳ ಕ್ಷೇತ್ರದಲ್ಲಿ ಒಟ್ಟು 1,89,437 ಮತದಾರರಿದ್ದು, ಅದರಲ್ಲಿ ಪುರುಷರು, 97,526, ಮಹಿಳೆಯರು 9,1907 ಹಾಗೂ 4 ಮಂದಿ ತೃತೀಯ ಲಿಂಗಿಗಳಿದ್ದಾರೆ. ಕ್ಷೇತ್ರದಲ್ಲಿ 2 ಸಖಿ ಮತಗಟ್ಟೆಗಳನ್ನು ಮಾಡಲಾಗಿದೆ. ಚುನಾವಣೆಗೆ 54 ಸೂಕ್ಷ್ಮ ವೀಕ್ಷಕಕರು, 18 ಸೆಕ್ಟೆರ್ ಅಧಿಕಾರಿಗಳು ಸೇರಿದಂತೆ 1,113 ಸಿಬ್ಬಂದಿಯನ್ನು ಜಿಲ್ಲಾಡಳಿತ ಮತದಾನಕ್ಕೆ ನಿಯೋಜನೆ ಮಾಡಿದೆ. ಹೆಚ್ಚುವರಿಯಾಗಿ 44 ಇವಿಎಂ ಹಾಗೂ 157 ವಿವಿಪ್ಯಾಟ್ ಬಳಕೆ ಮಾಡಲಾಗುತ್ತಿದೆ.ಈ ಕ್ಷೇತ್ರದ 2,487 ವಿಕಲಚೇತನ ಮತದಾರರಿಗೆ, 134 ವಾಹನಗಳ ವ್ಯವಸ್ಥೆ ಮಾಡಲಾಗಿದೆ. 259 ಮಂದಿ ಸೇವಾ ಮತದಾರರು ಕೆಲಸ ಮಾಡಲಿದ್ದಾರೆ. ಮೇ 17 ರಿಂದ ಮೇ 20ರ ಸಂಜೆ 6 ಗಂಟೆವರೆಗೂ ಡ್ರೈ ಡೇ ಘೋಷಣೆ ಮಾಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಚುನಾವಣಾ ಹಿನ್ನೆಲೆಯಲ್ಲಿ ಭದ್ರತೆಗಾಗಿ ಡಿವೈಎಸ್‍ಪಿ 2, ಸಿಪಿಐ 6, ಪಿಎಸ್‍ಐ 17, ಎಎಸ್‍ಐ 41, ಎಚ್‍ಸಿ 114, ಪಿಸಿ 144, ಹೋಮಗಾರ್ಡ್ 260 ಹಾಗೂ 272 ಅರೆಸೇನಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.ಚಿಂಚೋಳಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಡಾ. ಅವಿನಾಶ್ ಜಾಧವ್, ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ್ ಸೇರಿದಂತೆ ಒಟ್ಟು 17 ಜನ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಒಟ್ಟು 241 ಮತಗಟ್ಟೆಗಳಿದ್ದು, ಅವುಗಳಲ್ಲಿ 60 ಅತೀ ಸೂಕ್ಷ್ಮ ಮತಗಟ್ಟೆಗಳು ಹಾಗೂ 181 ಸಾಮಾನ್ಯ ಮತಗಟ್ಟೆಗಳಿವೆ. ಇದನ್ನೂ ಓದಿ:  ಚಿಂಚೋಳಿ ಉಪಕದನ: ಕೈ, ಬಿಜೆಪಿ ಅಭ್ಯರ್ಥಿಗಳು ಪ್ಲಸ್, ಮೈನಸ್ ಏನು? 2018ರ ಫಲಿತಾಂಶ ಏನಾಗಿತ್ತು?ಚಿಂಚೋಳಿ ಕ್ಷೇತ್ರದಲ್ಲಿ ಒಟ್ಟು 1,93,782 ಮತದಾರರಿದ್ದು, ಅವರಲ್ಲಿ ಪುರುಷರು 98,994 ಹಾಗೂ ಮಹಿಳೆಯರು 94,772 ಇದ್ದಾರೆ. ಚುನಾವಣೆಗೆ ಜಿಲ್ಲಾಡಳಿತವು ಒಟ್ಟು 1,112 ಸಿಬ್ಬಂದಿಯನ್ನು ನಿಯೋಜನೆ ಮಾಡಿದೆ. ಚುನಾವಣಾ ಹಿನ್ನೆಲೆಯಲ್ಲಿ ಭದ್ರತೆಗಾಗಿ ಡಿವೈಎಸ್‍ಪಿ 1, ಡಿಎಸ್‍ಪಿ 3, ಸಿಪಿಐ 12, ಪಿಎಸ್‍ಐ 18, ಎಎಸ್‍ಐ 44, ಕೆಎಸ್‍ಆರ್ ಪಿ 2 ತಂಡ, ಡಿಆರ್ 12 ತಂಡ ನಿಯೋಜನೆ ಮಾಡಲಾಗಿದೆ. ಇದರ ಜೊತೆಗೆ ಬಿಎಸ್‍ಎಫ್‍ನ ನಾಲ್ಕು ತುಕಡಿ ಭದ್ರತೆ ನಿಯೋಜನೆಗೊಂಡಿದೆ.Sign in to your account
Username or Email Address


Password

 Remember Me


