ಚಿಕ್ಕಬಳ್ಳಾಪುರ: ನಗರ ಹೊರವಲಯದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ನಾಗರಹಾವು ಪ್ರತ್ಯಕ್ಷವಾಗಿದೆ.ಜಿಲ್ಲಾಧಿಕಾರಿ ಕಚೇರಿಗೆ ತೆರಳುವ ಕೆಳ ಮಹಡಿಯಲ್ಲಿ ನಾಗರಹಾವು ಪ್ರತ್ಯಕ್ಷವಾಗಿದೆ. ನಾಗರಹಾವನ್ನು ನೋಡಿದ ಸಿಬ್ಬಂದಿ ಕೂಡಲೇ ಸಿಬ್ಬಂದಿ ಉರಗ ರಕ್ಷಕ ಪ್ರಥ್ವಿರಾಜ್ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದರು.ಈ ವಿಷಯ ತಿಳಿದು ಸ್ಥಳಕ್ಕೆ ಬಂದ ಉರಗ ರಕ್ಷಕ ಪ್ರಥ್ವಿರಾಜ್ ನಾಗರಹಾವನ್ನು ಸೆರೆ ಹಿಡಿದಿದ್ದಾರೆ. ಬಳಿಕ ಹಾವನ್ನು ಕಾಡಿಗೆ ಬಿಡುವ ಕಾಯಕ ಮಾಡಿದ್ದಾರೆ. ನಾಗರಹಾವನ್ನು ಸೆರೆಹಿಡಿಯುವ ದೃಶ್ಯವನ್ನು ಅಲ್ಲಿದ್ದ ಸಿಬ್ಬಂದಿ ತಮ್ಮ ಮೊಬೈಲಿನಲ್ಲಿ ಸೆರೆ ಹಿಡಿದಿದ್ದಾರೆ.ಇಷ್ಟು ದಿನ ಕೋತಿ ಕಾಟ, ಹೆಜ್ಜೇನು ಹುಳುಗಳ ಕಾಟದಿಂದ ಬೇಸತ್ತ ಸಿಬ್ಬಂದಿಗೆ ಈಗ ಹಾವುಗಳ ಭಯ ಶುರುವಾಗಿದೆ.Sign in to your account
Username or Email Address


Password

 Remember Me


