ಮಂಗಳೂರು: ನಟೋರಿಯಸ್ ರೌಡಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಘಟನೆ ತಡರಾತ್ರಿ ಮಂಗಳೂರಿನ ಜಪ್ಪಿನಮೊಗರಿನಲ್ಲಿ ನಡೆದಿದೆ.ಗೌರೀಶ್ ಹಲ್ಲೆಗೆ ಮುಂದಾದ ನಟೋರಿಯಸ್ ರೌಡಿ. ಗೌರೀಶ್ ಮಂಗಳೂರಿನ ನಟೋರಿಯಸ್ ರೌಡಿ ಆಗಿದ್ದು, ಆತನನ್ನು ಬಂಧಿಸಲು ಪೊಲೀಸರು ಖೆಡ್ಡಾ ತೋಡಿದ್ದರು. ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದು, ಪೊಲೀಸರು ಆತನಿಗೆ ಶೂಟ್ ಮಾಡಿದ್ದಾರೆ.ಬಂಧನದ ವೇಳೆ ಗೌರೀಶ್ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಪೊಲೀಸ್ ಹಾಗೂ ಗೌರೀಶ್ ಘರ್ಷಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಶೀನಪ್ಪ ಎಂಬವರಿಗೆ ಗಾಯವಾಗಿದೆ. ಶೀನಪ್ಪ ಅವರಿಗೆ ಗಾಯವಾಗಿದ್ದು, ನೋಡಿ ಪೊಲೀಸರು ತಮ್ಮ ಜೀವರಕ್ಷಣೆಗೆ ಗೌರೀಶ್ ಕಾಲಿಗೆ ಗುಂಡು ಹಾರಿಸಿದ್ದಾರೆ.ಗೌರೀಶ್ 3 ಮರ್ಡರ್ ಸೇರಿದಂತೆ 6 ಪ್ರಕರಣದಲ್ಲಿ ಭಾಗಿಯಾಗಿದ್ದನು. ಅಲ್ಲದೆ ಆತ ಜನರಿಂದ ಹಫ್ತಾ ವಸೂಲಿ ಪಡೆಯುತ್ತಿದ್ದ ಬಗ್ಗೆ ದೂರು ಕೇಳಿ ಬಂದಿತ್ತು. ಸದ್ಯ ಗಾಯಾಳು ಪೊಲೀಸ್ ಮತ್ತು ರೌಡಿ ಗೌರೀಶ್‍ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.Sign in to your account
Username or Email Address


Password

 Remember Me


