ಮಂಗಳೂರು: ಪಶ್ಚಿಮ ಘಟ್ಟದ ತಪ್ಪಲಿನ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಾಳುಗೋಡು ಅರಣ್ಯ ಪ್ರದೇಶದಲ್ಲಿ ಕಾಡಾನೆಯೊಂದು ಮುಂಗಾಲು ಮುರಿದು ನರಕಯಾತನೆ ಪಡುತ್ತಿರುವುದು ದೃಶ್ಯ ಬೆಳಕಿಗೆ ಬಂದಿದೆ.ಬಾಳುಗೋಡು ಗ್ರಾಮದ ಪದಕ ಎಂಬಲ್ಲಿ ಕಾಡಾನೆ ಇದ್ದು ಮುಂದಿನ ಎಡ ಕಾಲು ಊರಲಾಗದೇ ಯಾತನೆ ಪಡುತ್ತಿದೆ. ಎಲ್ಲಿಯೋ ಹೊಂಡಕ್ಕೆ ಬಿದ್ದು ಕಾಲು ಮುರಿದುಕೊಂಡಿರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.ಸುಬ್ರಹ್ಮಣ್ಯ ಅರಣ್ಯ ವಿಭಾಗದ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ನಾಗರಹೊಳೆಯಿಂದ ನುರಿತ ವೈದ್ಯರನ್ನು ಕರೆಸಿ ಚಿಕಿತ್ಸೆ ನೀಡುವ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಆದರೆ, ಅಧಿಕಾರಿಗಳು ವಿಳಂಬ ಧೋರಣೆ ಮಾಡಿದರೆ ಕಾಡಾನೆಗೆ ತೊಂದರೆಯಾಗಲಿದೆ.ಇತ್ತೀಚೆಗಷ್ಟೇ ಮೈಸೂರಿನ ಅಂಬಾರಿ ಹೊರುವ ಆನೆ ದ್ರೋಣ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸಾವನ್ನಪ್ಪಿತ್ತು. ಹೀಗಾಗಿ ಆದಷ್ಟು ಬೇಗ ಒಂಟಿ ಆನೆಗೆ ಚಿಕಿತ್ಸೆ ನೀಡಬೇಕಾಗಿದೆ.Sign in to your account
Username or Email Address


Password

 Remember Me


