ಚಿಕ್ಕೋಡಿ: 8 ವಾಹನಗಳ ಮಧ್ಯೆ ಭೀಕರ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 6 ಮಂದಿ ಗಂಭೀರ ಗಾಯಗೊಂಡ ಘಟನೆ ಬೆಳಗಾವಿ (Belagavi) ಜಿಲ್ಲೆಯ ನಿಪ್ಪಾಣಿ (Nippani) ತಾಲೂಕಿನ ಸ್ಥವನಿಧಿ ಘಾಟ್ ಬಳಿ ನಡೆದಿದೆ.ಕಂಟೇನರ್ ವಾಹನದ ಚಾಲಕನ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಕಂಟೇನರ್ ಮೂರು ಕಾರು, ಎರಡು ಲಾರಿ, ಒಂದು ಕಂಟೇನರ್ ಹಾಗೂ ಬೈಕ್‌ಗೆ ಗುದ್ದಿದ ಪರಿಣಾಮ ಒಬ್ಬ ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಗದಗ: ಮಾನವ ಸರಪಳಿ ವೇಳೆ ಜನರ ಮೇಲೆ ಹೆಜ್ಜೇನು ದಾಳಿ – ಸ್ಥಳದಿಂದ ಚದುರಿದ ಜನಘಟನೆಯಲ್ಲಿ ಗಂಭೀರ ಗಾಯಗೊಂಡವರಿಗೆ ನಿಪ್ಪಾಣಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ನಿಪ್ಪಾಣಿ ಶಹರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಪ್ಪಾಣಿ ಶಹರ ಪೊಲೀಸ್ ಠಾಣಾ ವ್ತಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ತುಮಕೂರು| ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಮೂವರ ದಾರುಣ ಸಾವು






 Advertisement 




Sign in to your account
Username or Email Address


Password

 Remember Me


