ಗದಗ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ (International Democracy Day) ಅಂಗವಾಗಿ ಹಮ್ಮಿಕೊಂಡಿದ್ದ ಬೀದರ್‌ನಿಂದ (Bidar) ಚಾಮರಾಜನಗರದವರೆಗೆ (Chamarajanagar) ರಾಜ್ಯದ ಅತಿ ಉದ್ದದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿ ಮಾಡಿದ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ (Lakshmeshwar) ತಾಲೂಕಿನ ಬಾಲೆಹೊಸೂರ ಗ್ರಾಮದಲ್ಲಿ ನಡೆದಿದೆ.ಇದನ್ನೂ ಓದಿ: ಈಗ ಸೇವೆಗಳಲ್ಲಿ ಸ್ವಾರ್ಥ ಬಂದಿದೆ: ಹೆಚ್‌.ಆರ್‌.ರಂಗನಾಥ್‌ ಬೇಸರಶಿಗ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿ ಸರಸ್ವತಿ ಗುಡಿಸಾಗರ ಹಾಗೂ ಸರೋಜಾ ದಿಂಡೂರು ಎಂಬ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಮುಖ, ತಲೆ, ಮೈ, ಕೈಗೆ ತೀವ್ರವಾಗಿ ಕಚ್ಚಿವೆ. ನೋವಿನ್ನು ಸಹಿಸಲಾಗದೇ ಅಸ್ವಸ್ಥಗೊಂಡಿದ್ದಾರೆ.ತಕ್ಷಣವೇ ಇಬ್ಬರು ಶಿಕ್ಷಕಿಯರಿಗೆ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರು ತಮ್ಮ ಕಾರಿನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದರು. ಬಳಿಕ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಪೆಟ್ಟಾ’ ಚಿತ್ರದ ನಟಿ ಮೇಘಾSign in to your account
Username or Email Address


Password

 Remember Me


