ಬೆಂಗಳೂರು: ಬಳ್ಳಾರಿ ಉಪಚುನಾವಣೆಯಲ್ಲಿ ಮುಖಾಮುಖಿಯಾಗಿ ಪೈಪೋಟಿ ನೀಡಿದ್ದ ಬಿಜೆಪಿ ಮುಖಂಡ, ಶಾಸಕ ಶ್ರೀರಾಮುಲು ಹಾಗೂ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ತೆಲಂಗಾಣದಲ್ಲೂ ಮುಖಾಮುಖಿಯಾಗುವ ಸಾಧ್ಯತೆಯಿದೆ.ಈಗಾಗಲೇ ಡಿಕೆ ಶಿವಕುಮಾರ್ ಅವರಿಗೆ ತೆಲಂಗಾಣ ವಿಧಾನಸಭಾ ಚುನಾವಣೆಯ ಉಸ್ತುವಾರಿಯನ್ನು ನೀಡಲಾಗಿದ್ದು ಪಕ್ಷದ ಮೈತ್ರಿ ಕಾರ್ಯದಲ್ಲಿ ತೊಡಗಿದ್ದಾರೆ. ಅಲ್ಲದೇ ಅಲ್ಲಿನ ತೆಲುಗು ದೇಶಂ ಪಕ್ಷ(ಟಿಡಿಪಿ)ದ ಜೊತೆಗಿನ ಮೈತ್ರಿ ವೇಳೆ ಕಾಂಗ್ರೆಸ್ ಪಕ್ಷದಲ್ಲಿ ಉಂಟಾದ ಅಸಮಾಧಾನವನ್ನು ಶಮನ ಮಾಡುವ ಕಾರ್ಯದಲ್ಲಿದ್ದಾರೆ. ಈಗಾಗಲೇ ಡಿಕೆ ಶಿವಕುಮಾರ್ ಅವರು ಒಂದು ಹಂತದ ಪ್ರಚಾರವನ್ನು ಪೂರ್ಣಗೊಳಿಸಿದ್ದಾರೆ.ಇತ್ತ ತೆಲಂಗಾಣದಲ್ಲಿ ಡಿಕೆ ಶಿವಕುಮಾರ್ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡ ಬೆನ್ನಲ್ಲೇ ಬಿಜೆಪಿ ಟಾಂಗ್ ನೀಡಲು ಮುಂದಾಗಿದ್ದು, ಈ ದೃಷ್ಟಿಯಿಂದ ಬಿಜೆಪಿ ಪರ ಪ್ರಚಾರದಲ್ಲಿ ತೊಡಗುವಂತೆ ಶ್ರೀರಾಮುಲುಗೆ ಹೈಕಮಾಂಡ್ ಸೂಚನೆ ನೀಡಿದೆ. ಡಿಸೆಂಬರ್ ಮೊದಲ ವಾರದಲ್ಲಿ ತೆಲಂಗಾಣದಲ್ಲಿ ಪ್ರಚಾರದಲ್ಲಿ ಶ್ರೀರಾಮುಲು ಭಾಗವಹಿಸಲಿದ್ದು, ಸದ್ಯ ಮೂರು ದಿನಗಳ ಕಾಲ ರಾಮುಲು ಅವರ ಪ್ರಚಾರದ ವೇಳಾಪಟ್ಟಿ ನಿಗದಿಯಾಗಿದೆ.ಬಳ್ಳಾರಿಯಲ್ಲಿ ಡಿಕೆ ಶಿವಕುಮಾರ್ ಪಕ್ಷದ ಅಭ್ಯರ್ಥಿ ಉಗ್ರಪ್ಪ ಅವರನ್ನು ನಿರೀಕ್ಷೆಗೂ ಹೆಚ್ಚಿನ ಮತಗಳಿಂದ ಜಯಗಳಿಸುವಂತೆ ಮಾಡಿದ್ದರು. ಈ ಮೂಲಕ ಬಳ್ಳಾರಿಯಲ್ಲಿ ಶಾಸಕ ಶ್ರೀರಾಮುಲು ಅವರಿಗೆ ಅಣ್ಣ ಎನ್ನುತ್ತಲೇ ಸೋಲಿನ ರುಚಿ ತೋರಿಸಿದ್ದರು. ಈಗ ತೆಲಂಗಾಣದಲ್ಲಿ ಇಬ್ಬರ ನಡುವಿನ ಫೈಟ್ ಹೇಗೆ ಸಾಗಲಿದೆ ಎನ್ನುವ ಕುತೂಹಲ ಹೆಚ್ಚಾಗಲಿದೆ.Lakhs of people attended a massive rally to listen to Smt. Sonia Gandhi & Shri @RahulGandhi addressing them at Medchal in Telangana yesterday.The groundswell of support indicates that the Congress led alliance is heading towards a clear majority in the Telangana Election. pic.twitter.com/RA1dognvZX— DK Shivakumar (@DKShivakumar) November 24, 2018ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictvSign in to your account
Username or Email Address


Password

 Remember Me


