ಬೆಳಗಾವಿ: ಜಮ್ಮುವಿನಲ್ಲಿ ಸೋಮವಾರ ವೀರಮರಣ ಹೊಂದಿದ್ದ ಯೋಧ ಪ್ರಕಾಶ್ ಜಾಧವ್ ಅವರ ಪಾರ್ಥಿವ ಶರೀರ ಇಂದು ಅವರ ಸ್ವಗ್ರಾಮ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೂಧಿಹಾಳ ಗ್ರಾಮಕ್ಕೆ ತಲುಪಲಿದೆ.ಯೋಧ ಪ್ರಕಾಶ್ ಜಾಧವ್ ಜಮ್ಮುವಿನಲ್ಲಿ ಉಗ್ರರ ಜತೆ ಸೆಣಸಾಡಿ ವೀರಮರಣ ಹೊಂದಿದ್ದರು. ಇಂದು ಪ್ರಕಾಶ್ ಪಾರ್ಥಿವ ಶರೀರ ದೆಹಲಿ, ಪುಣೆ, ಬೆಳಗಾವಿ ಮಾರ್ಗವಾಗಿ ಸ್ವಗ್ರಾಮ ಬೂಧಿಹಾಳಕ್ಕೆ ಸೇನಾ ಸಿಬ್ಬಂದಿ ತರಲಿದ್ದಾರೆ. ವೀರ ಮರಣ ಹೊಂದಿರುವ ಪ್ರಕಾಶ್ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವದೊಂದಿಗೆ ಇಂದು ನಡೆಯಲಿದೆ.ಪ್ರಕಾಶ್ ಅವರಿಗೆ ಕಳೆದ ವರ್ಷ ಮದುವೆಯಾಗಿತ್ತು. ಮೂರು ತಿಂಗಳ ಮಗು ಕೂಡ ಇತ್ತು. ಇದೀಗ ಯೋಧ ತನ್ನ ಮಡದಿ, ಮಗು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ವೀರಯೋಧನ ಸಾವಿನಿಂದ ಅವರ ಸ್ವಗ್ರಾಮದಲ್ಲಿ ನೀರವ ಮೌನ ಮಡುಗಟ್ಟಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictvSign in to your account
Username or Email Address


Password

 Remember Me


