ವಿಜಯಪುರ: ಮಾಜಿ ಪ್ರಧಾನಿ ದೇವೇಗೌಡ ಹಾಗೂ ಹಾಲಿ ಸಚಿವ ಎಂ.ಸಿ.ಮನಗೂಳಿ ಕಂಚಿನ ಪುತ್ಥಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ನಾಶಮಾಡಲು ಯತ್ನಿಸಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ನಡೆದಿದೆ.ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದ ಹೊರಭಾಗದಲ್ಲಿದ್ದ ಮೂರ್ತಿಗಳಿಗೆ ಬೆಂಕಿ ಹಚ್ಚಿದ್ದು, ವಿಗ್ರಹಗಳು ಬೆಂಕಿಯ ಕೆನ್ನಾಲಿಗೆಗೆ ಹಾನಿಯಾಗೀಡಾಗಿವೆ. ಇಂದು ನಸುಕಿನ ಜಾವ ದುಷ್ಕರ್ಮಿಗಳು ಪುತ್ಥಳಿಗೆ ಬೆಂಕಿ ಹಚ್ಚಿರುವ ಅನುಮಾನ ವ್ಯಕ್ತವಾಗಿದೆ.ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಕಾರಣರಾಗಿದ್ದ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಎಂ.ಸಿ. ಮನಗೂಳಿ ಅವರ ಹೋರಾಟದ ನೆನಪಿಗಾಗಿ ಈ ಪುತ್ಥಳಿಗಳನ್ನು ನಿರ್ಮಾಣ ಮಾಡಲಾಗಿತ್ತು. 2014 ಫೆಬ್ರವರಿ 12 ರಂದು ಎರಡು ಪುತ್ಥಳಿಗಳನ್ನು ಉದ್ಘಾಟನೆ ಮಾಡಲಾಗಿತ್ತು. ಆದ್ರೆ ಇದೀಗ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ.ಈ ಕುರಿತು ಮಾಹಿತಿ ಪಡೆದು ಸಿಂಧಗಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ರಾಜಕಾರಣದ ದ್ವೇಷದಿಂದ ಈ ರೀತಿ ಮಾಡಿದ್ದಾರೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆಗೆ ಕಾರಣರಾದವರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.ಈ ಘಟನೆ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictvSign in to your account
Username or Email Address


Password

 Remember Me


