ಚಿತ್ರದುರ್ಗ: ಚಾಕುವಿನಿಂದ ಕತ್ತು ಕೊಯ್ದು ಕೊಲೆ ಚಿನ್ನದಂಗಡಿ ಮಾಲೀಕನನ್ನು ಬರ್ಬರವಾಗಿ ಕೊಲೆಗೈದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.ಕಲ್ಯಾಣ್ ಸಿಂಗ್ (54) ಬರ್ಬರವಾಗಿ ಕೊಲೆಯಾದ ಚಿನ್ನದಂಗಡಿ ಮಾಲೀಕ. ಈ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ರಾಮಗಿರಿ ಗ್ರಾಮದಲ್ಲಿ ನಡೆದಿದೆ.ವ್ಯಾಪಾರ ವಹಿವಾಟಿಗೆ ಸ್ನೇಹಿತರ ನಡುವೆ ಗಲಾಟೆ ನಡೆದು, ಗೊತ್ತಿಲ್ಲದ ಊರಿಗೆ ಬಂದು ಕಲ್ಯಾಣ್ ಸಿಂಗ್ ಹೆಣವಾಗಿದ್ದಾರೆ. ಕೊಲೆಗೈದ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.ಸದ್ಯ ಸ್ಥಳಕ್ಕೆ ಸ್ಥಳೀಯ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictvSign in to your account
Username or Email Address


Password

 Remember Me


