ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಇಂದು ಸಚಿವ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.ಬಿಎಸ್ ವೈ ಜೊತೆ ಹಾಲಪ್ಪ, ಬಿ.ವೈ .ರಾಘವೇಂದ್ರ ಕೂಡ ಡಿಕೆಶಿ ಭೇಟಿ ಮಾಡಿದ್ದು, ಉಭಯ ನಾಯಕರ ಭೇಟಿ ತೀವ್ರ ಕುತೂಹಲ ಹುಟ್ಟಿಸಿತ್ತು. ಆದ್ರೆ ಸಿಗಂದೂರು ಸೇತುವೆ ನಿರ್ಮಾಣ ವಿಚಾರ ಕುರಿತು ಚರ್ಚಿಸಲು ಬಿಜೆಪಿ ನಾಯಕರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿದೆ.ಇದಕ್ಕೂ ಮೊದಲು ಡಾಲರ್ಸ್ ಕಾಲೋನಿ ನಿವಾಸದಲ್ಲಿ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ಡಿ.ಕೆ.ಶಿವಕುಮಾರ್ ಭೇಟಿಗೆ ಹೊರಟಿದ್ದೇವೆ. ಶಿವಮೊಗ್ಗ ನೀರಾವರಿ ಯೋಜನೆಗಳು, ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುತ್ತೇವೆ. ಗುರುವಾರ ದಿವಂಗತ ಅನಂತ್ ಕುಮಾರ್ ಅವರಿಗೆ ಶ್ರದ್ಧಾಂಜಲಿ ಸಭೆ ಮಾಡ್ತಿದ್ದೇವೆ. ಇದರ ಜೊತೆಗೆ ನಾಳೆ ಶಾಸಕಾಂಗ ಪಕ್ಷದ ಸಭೆಯೂ ಇದೆ. ಶಾಸಕಾಂಗ ಪಕ್ಷದ ಸಭೆ ನಂತರ ಮತ್ತೆ ನಾವೆಲ್ಲಾ ಶಾಸಕರು ಒಂದೆಡೆ ಸೇರುತ್ತಿದ್ದೇವೆ ಅಂತ ಹೇಳಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictvSign in to your account
Username or Email Address


Password

 Remember Me


