ಹಾಸನ: ಜೆಡಿಎಸ್ ಮಾಜಿ ಶಾಸಕ ಎಚ್.ಎಸ್ ಪ್ರಕಾಶ್ ಅನಾರೋಗ್ಯದಿಂದ ನಿಧನರಾಗಿದ್ದಾರೆ.ಎಚ್.ಎಸ್ ಪ್ರಕಾಶ್ ಇತ್ತೀಚೆಗೆ ಲಿವರ್ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರಕಾಶ್ ಕೃತಕ ಉಸಿರಾಟದಲ್ಲಿದ್ದರು. ಇಂದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪತ್ನಿ ಮತ್ತು ಇಬ್ಬರು ಮಕ್ಕಳು ಸೇರಿದಂತೆ ಅಪಾರ ಅಭಿಮಾನಿಗಳು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಕ್ಕೆ ಪ್ರಕಾಶ್ ಅವರು ಆಪ್ತರಾಗಿದ್ದರು. ಪ್ರಕಾಶ್ 4 ಬಾರಿ ಹಾಸನ ಕ್ಷೇತ್ರದಿಂದ ಶಾಸಕರಾಗಿದ್ದರು. ಅಲ್ಲದೇ ಕಳೆದ ಬಾರಿ ವಿಧಾನಸಭಾ ಚುಣಾವಣೆಯಲ್ಲಿ ಸೋಲು ಅನುಭವಿಸಿದ್ದರು. ಪ್ರಕಾಶ್ ಅವರು ಜೆಡಿಎಸ್ ಪಕ್ಷದಿಂದ ಸತತವಾಗಿ ಆಯ್ಕೆಯಾಗಿದ್ದರು. ಪ್ರಕಾಶ್ ಅವರು 1994, 2004, 2008 ಹಾಗೂ 2013ರಲ್ಲಿ ಚುನಾವಣೆಯಲ್ಲಿ ಗೆದ್ದಿದ್ದಾರೆ. ನಂತರ 2018ರಲ್ಲಿ ಬಿಜೆಪಿ ಅಭ್ಯರ್ಥಿ ಪ್ರೀತಂ ಜೆ ಗೌಡ ವಿರುದ್ಧ ಸೋಲು ಅನುಭವಿಸಿದ್ದಾರೆ.ಎಚ್.ಎಸ್ ಪ್ರಕಾಶ್ ಅವರ ಮೃತದೇಹ ಇಂದು ಹಾಸನಕ್ಕೆ ರವಾನಿಸುವ ಸಾಧ್ಯತೆ ಇದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictvSign in to your account
Username or Email Address


Password

 Remember Me


