ಕೋಲಾರ: ರೋಗಿಯೊಬ್ಬ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನೋವು ತಾಳಲಾರದೇ ಆಸ್ಪತ್ರೆಯಲ್ಲಿಯೇ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಆರ್.ಎಲ್ ಜಾಲಪ್ಪ ಆಸ್ಪತ್ರೆಯಲ್ಲಿ ನಡೆದಿದೆ.ಕೋಲಾರದ ಚಿನ್ನಾಪುರ ಗ್ರಾಮದ ಮಂಜುನಾಥ್ (38) ಆತ್ಯಹತ್ಯೆಗೆ ಶರಣಾದ ವ್ಯಕ್ತಿ. ಮಂಜುನಾಥ್ ಹಲುವು ದಿನಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆಗೆಂದು ಆರ್.ಎಲ್ ಜಾಲಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.ಆಸ್ಪತ್ರೆಯಲ್ಲಿ ಮಂಜುನಾಥ್‍ಗೆ ಇಂಜೆಕ್ಷನ್ ಕೊಟ್ಟ ವೇಳೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದೆ. ನೋವು ತಾಳಲಾರದೇ ಆಸ್ಪತ್ರೆಯ ಬಾತ್ ರೂಂ ನಲ್ಲಿ ಗ್ಯಾಸ್ ಪೈಪ್ ಬಳಸಿಕೊಂಡು ಮಂಜುನಾಥ್ ಆತ್ಮಹತ್ಯೆಗೆ ಶರಣಾಗಿದ್ದಾರೆ.ಘಟನೆ ಕುರಿತು ಕೋಲಾರದ ಗಲ್‍ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictvSign in to your account
Username or Email Address


Password

 Remember Me


