ಮಂಡ್ಯ: ವೆಂಟಿಲೇಟರ್ ಸಮಸ್ಯೆಯಿಂದಾಗಿ 29 ದಿನದ ಹಸುಗೂಸು ಮೃತಪಟ್ಟ ಘಟನೆ ನಗರದ ಮಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.ಮದ್ದೂರು ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದ ಶಶಿಕುಮಾರ್ ಮತ್ತು ಶೃತಿ ದಂಪತಿಯ ಗಂಡು ಮಗು ಮೃತಪಟ್ಟಿದೆ. ಗುರುವಾರ ಬೆಳಗ್ಗೆ ಮಗುವಿಗೆ ಉಸಿರಾಟ ಸಮಸ್ಯೆ ಕಂಡುಬಂದಿತ್ತು. ಕೂಡಲೇ ಪೋಷಕರು ಮಗುವನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದರೆ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಮಸ್ಯೆ ಇದ್ದರಿಂದ ಮಗುವನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದ್ದರು.ವೈದ್ಯರು ನಿರಾಕರಿಸುತ್ತಿದ್ದಂತೆ ಮಗುವನ್ನು ಆ್ಯಂಬುಲೆನ್ಸ್ ಮುಖಾಂತರ ಮೈಸೂರು ಆಸ್ಪತ್ರೆ ಕರೆದುಕೊಂಡು ಹೋಗಿದ್ದಾರೆ. ಮಗುವನ್ನು ಪರೀಕ್ಷಿಸಿದ ವೈದ್ಯರು ಈಗಾಗಲೇ ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಮಿಮ್ಸ್ ಆಸ್ಪತ್ರೆಯ ವೈದ್ಯರು ಮಗುವನ್ನು ತಕ್ಷಣವೇ ದಾಖಲಿಸಿಕೊಂಡು ಚಿಕಿತ್ಸೆ ನೀಡಿದ್ದರೇ ಮಗು ಬದುಕುಳಿಯುತ್ತಿತ್ತು ಎಂದು ಪೋಷಕರು ಕಣ್ಣೀರು ಹಾಕಿದ್ದಾರೆ. ಗಂಭೀರ ಪರಿಸ್ಥಿತಿಯಲ್ಲಿದ್ದ ಮಗವನ್ನು ತಕ್ಷಣವೇ ದಾಖಲಿಸಿಕೊಳ್ಳದೇ ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆ. ಮಗುವಿನ ಸಾವಿಗೆ ಮಿಮ್ಸ್ ವೈದ್ಯರುಗಳೇ ಕಾರಣವೆಂದು ಪೋಷಕರು ಗಂಭೀರವಾಗಿ ಆರೋಪಿಸಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictvSign in to your account
Username or Email Address


Password

 Remember Me


