ಹಾವೇರಿ: ಸಮ್ಮಿಶ್ರ ಸರ್ಕಾರದ ರಚನೆಯಾದ ಬಳಿಕ ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಗಳಲ್ಲಿ ಒಬ್ಬರಾಗಿರುವ ಶಾಸಕ ಬಿಸಿ ಪಾಟೀಲ್ ಅವರಿಗೆ ಮುಂದಿನ ಸಚಿವ ಸಂಪುಟ ವಿಸ್ತರಣೆಗೆ ವೇಳೆ ಮಂತ್ರಿಸ್ಥಾನ ನೀಡಲಾಗುವುದು ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಶಾಸಕ ಬಿಸಿ ಪಾಟೀಲ್ ನನಗಿಂತ ಹಿರಿಯರು. ನಾನು ಅವರನ್ನು ಮಂತ್ರಿ ಮಾಡಬೇಕೆಂದು ಮುಖಂಡರಿಗೆ ತಿಳಿಸಿದ್ದೇನೆ. ಖಂಡಿತ ಅವರು ಈ ಬಾರಿ ಸಚಿವರಾಗುತ್ತಾರೆ. ಮುಂದಿನ ಡಿಸೆಂಬರ್ 3ರ ಒಳಗೆ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿದರು.ಇದೇ ವೇಳೆ ಮಾತನಾಡಿದ ಶಾಸಕ ಬಿಸಿ ಪಾಟೀಲ್, ನಾನು ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದು, ಯಾವುದಕ್ಕೂ ಈಗಲೇ ನಿರ್ಧಾರ ಕೈಗೊಳ್ಳುವುದಿಲ್ಲ. ಕಳೆದ 4, 5 ತಿಂಗಳಿನಿಂದ ಸಚಿವ ಸ್ಥಾನ ಬಗ್ಗೆ ಕಾಯುತ್ತಿದ್ದೇನೆ. ಇನ್ನು ಹತ್ತು ದಿನ ಕಾಯುವುದರಲ್ಲಿ ಏನು ಆಗುವುದಿಲ್ಲ. ಇಲ್ಲವಾದರೆ ಶಾಸಕನಾಗಿಯೇ ಇರುತ್ತೇನೆ. ಸಚಿವನಾದರೆ ತಾಲೂಕಿನ, ಜಿಲ್ಲೆಯ ಸೇವೆ ಮಾಡಲು ಸಹಕಾರ ಆಗಲಿದೆ. ಶೀಘ್ರವೇ ಸಂಪುಟ ರಚನೆ ಮಾಡುವುದಾಗಿ ಹೇಳಿದ್ದಾರೆ. ಈ ಬಾರಿ ಆಗದಿದ್ದರೆ ಇನ್ನೊಂದು ದಿನಾಂಕ ಕೊಡಬಹುದು. ನಾನು ಆಶಾವಾದಿಯಾಗಿದ್ದು, ತಾಳಿದವನು ಬಾಳಿಯಾನು ಎಂಬಂತೆ ನಾನು ಶಾಸನಾಗಿಯೇ ಇರುತ್ತೇನೆ ಎಂದರು.ಇದಕ್ಕೂ ಮುನ್ನ ಸಂಪುಟ ವಿಸ್ತರಣೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಪರಮೇಶ್ವರ್ ಅವರು, ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಜೊತೆ ಚರ್ಚೆ ನಡೆಸುವ ಅಗತ್ಯವಿದೆ. ಆದರೆ ಪಂಚರಾಜ್ಯಗಳ ಚುನಾವಣೆಯ ಪ್ರವಾಸದಲ್ಲಿ ರಾಹುಲ್ ಗಾಂಧಿ ಅವರು ನಿರತರಾಗಿವುದರಿಂದ ಕಾರಣ ಸಚಿವ ಸಂಪುಟ ಸಭೆ ತಡವಾಗಲಿದೆ. ಅಧಿವೇಶನದ ಒಳಗೆ ಸಂಪುಟ ವಿಸ್ತರಣೆ ಮಾಡಿದರೆ ಉತ್ತಮವಾಗಿರಲಿದೆ ಎಂದು ಹೈಕಮಾಂಡ್‍ಗೆ ಮನವಿ ಮಾಡಿದ್ದೇವೆ. ಅವರು ಯಾವ ರೀತಿ ನಮಗೇ ಸೂಚನೆ ನೀಡುತ್ತಾರೆ ಎಂಬುವುದನ್ನು ಕಾದು ನೋಡಬೇಕು ಎಂದರು. ಡಿಸಿಎಂ ಪರಮೇಶ್ವರ್ ಹೇಳಿಕೆ ಬೆನ್ನಲ್ಲೇ ಶಾಸಕ ಬಿಸಿ ಪಾಟೇಲ್ ಈ ಹೇಳಿಕೆ ನೀಡಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictvSign in to your account
Username or Email Address


Password

 Remember Me


