ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವ ಮೈತ್ರಿ ಸರ್ಕಾರದ ಮಹತ್ವದ ‘ಬಡವರ ಬಂಧು’ ಯೋಜನೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಇಂದು ಚಾಲನೆ ನೀಡಲಿದ್ದಾರೆ.ಗುರುವಾರ ಬೆಳಗ್ಗೆ 11 ಗಂಟೆಗೆ ನಗರದ ಯಶವಂತಪುರದ ಎಪಿಎಂಸಿ ಯಾರ್ಡ್ ನಲ್ಲಿ ಮುಖ್ಯಮಂತ್ರಿಗಳು ‘ಬಡವರ ಬಂಧು’ ಯೋಜನೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು ನಗರವೊಂದರಲ್ಲೇ ಮೊದಲ ದಿನವೇ 53 ಸಾವಿರ ವರ್ತಕರಿಗೆ ನೆರವು ನೀಡಲಾಗುವುದು. ಈಗಾಗಲೇ ರಾಜ್ಯಾದ್ಯಂತ ಬಡವರ ಬಂಧು ಯೋಜನೆಯಡಿ ಸಾಲಕ್ಕಾಗಿ ಭಾರಿ ಬೇಡಿಕೆ ಬಂದಿದೆ. ಈ ಯೋಜನೆಯಿಂದ ಖಾಸಗಿ ಲೇವಾದೇವಿದಾರರ ಮೀಟರ್ ಬಡ್ಡಿ ದಂಧೆಯ ಮೇಲೆ ಕಡಿವಾಣ ಬೀಳುತ್ತದೆ ಎಂದು ಹೇಳಲಾಗುತ್ತಿದೆ.ಇದಲ್ಲದೇ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಬಡವರ ಬಂಧು ಯೋಜನೆಗೆ ಒಂದೊಂದು ನೋಡಲ್ ಬ್ಯಾಂಕ್ ಗುರುತಿಸಲಾಗುತ್ತದೆ. ಈ ಬ್ಯಾಂಕುಗಳು ಆಯಾ ಜಿಲ್ಲೆಗಳಲ್ಲಿನ ಸಾಲ ಸೌಲಭ್ಯದ ಬ್ಯಾಂಕ್‍ಗಳನ್ನು ಸೂಚಿಸುತ್ತವೆ. ಬೆಂಗಳೂರಿನಲ್ಲಿ ಸಿಟಿ ಕೋ-ಆಪರೇಟಿವ್ ಬ್ಯಾಂಕ್, ಜನತಾ ಕೋ-ಆಪರೇಟಿವ್ ಬ್ಯಾಂಕ್ ಹಾಗೂ ಬೆಂಗಳೂರು ಡಿಸಿಸಿ ಬ್ಯಾಂಕ್‍ಗಳನ್ನು ನೋಡಲ್ ಬ್ಯಾಂಕ್‍ಗಳಾಗಿ ಗುರುತಿಸಲಾಗಿದೆ. ಈ ಬ್ಯಾಂಕ್‍ಗಳು ಮೊಬೈಲ್ ಸರ್ವಿಸ್ ವ್ಯಾನ್‍ಗಳನ್ನು ಹೊಂದಲಿವೆ. ಸಣ್ಣ ವರ್ತಕರು ಬೆಳಗ್ಗೆ ಸಾಲ ಪಡೆದು ಸಂಜೆ ವಾಪಸ್ ಮಾಡಬಹುದಾಗಿದೆ.ಏನಿದು ಬಡವರ ಬಂಧು ಯೋಜನೆ?
ವರ್ತಕರಿಗೆ ಶೂನ್ಯ ಬಡ್ಡಿದರದಲ್ಲಿ 10 ಸಾವಿರ ರೂ.ವರೆಗೆ ಸಾಲ ನೀಡುವ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ. ಮೀಟರ್ ಬಡ್ಡಿ ದಂಧೆಗೆ ಶಾಶ್ವತ ಪರಿಹಾರ ನೀಡುವ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ಬಡ್ಡಿ, ಸಾಲದ ಶೂಲಕ್ಕೆ ಸಿಲುಕಿರುವ ಜನರ ನೆರವಿಗೆ ಬರಲು ‘ಬಡವರ ಬಂಧು’ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆ ಇಂದ ಬೀದಿ ಬದಿ ವ್ಯಾಪಾರಿಗಳಿಗೆ ಇನ್ನು ಮುಂದೆ ಬಡ್ಡಿಯೇ ಇಲ್ಲದ ದಿನದ ಸಾಲ ಲಭ್ಯವಾಗಲಿದೆ. ಇದನ್ನೂ ಓದಿ: ಬೀದಿ ಬದಿ ವ್ಯಾಪಾರಿಗಳಿಗೆ ಇನ್ಮುಂದೆ ಸಿಗಲಿದೆ ಬಡ್ಡಿಯೇ ಇಲ್ಲದ ದಿನದ ಸಾಲ: ಏನಿದು ಬಡವರ ಬಂಧು ಯೋಜನೆ? ಯಾರು ಅರ್ಹರು?ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictvSign in to your account
Username or Email Address


Password

 Remember Me


