ಬೆಂಗಳೂರು/ಹಾಸನ: ತಮ್ಮ ಕ್ಷೇತ್ರಕ್ಕೆ ಹಣದ ಹೊಳೆಯನ್ನೇ ಹರಿಸಿಕೊಳ್ಳುವ ಮೂಲಕ ಕರ್ನಾಟಕದಲ್ಲಿ ಇರೋದು ಒಂದೇ ಕ್ಷೇತ್ರ, ಅದು ಹೊಳೆನರಸೀಪುರ ಎಂಬಂತಾಗಿದೆ.ಹೌದು. ಲೋಕೋಪಯೋಗಿ ಸಚಿವ ರೇವಣ್ಣ ಅವರು ಹೊಳೆನರಸೀಪುರದಲ್ಲಿ ವಾಣಿಜ್ಯ ಸಂಕೀರ್ಣ, ತ್ಯಾಜ್ಯ ನೀರು ಸಂಸ್ಕರಣಾ ಘಟಕದ ಪಂಪ್ ಉನ್ನತೀಕರಣಕ್ಕೆ ಹಣ ಬಿಡುಗಡೆ ಮಾಡುವಂತೆ ಮಾಡಿದ್ದಾರೆ. ಹೀಗಾಗಿ ಇದೀಗ ರೇವಣ್ಣ ಕ್ಷೇತ್ರ ಮಾತ್ರ ಉದ್ಧಾರ ಆದ್ರೆ ಸಾಕಾ..? ಬೇರೆ ಕ್ಷೇತ್ರಗಳಿಗೆ ಹೀಗೆನೇ ಅನುದಾನ ಸಿಗುತ್ತಾ ಅನ್ನೋ ಪ್ರಶ್ನೆ ಎದ್ದಿದೆ.ರೇವಣ್ಣ ಅವರ ಈ ಪ್ರಸ್ತಾವಕ್ಕೆ ಆರ್ಥಿಕ ಇಲಾಖೆ ಅಧಿಕಾರಿಗಳು, ಸಾಲಮನ್ನಾ, 6ನೇ ವೇತನ ಆಯೋಗದ ಶಿಫಾರಸ್ಸು ಜಾರಿ ಹಿನ್ನೆಲೆಯಲ್ಲಿ ಹಣ ಹೊಂದಿಸಲು ತೊಂದರೆ ಆಗುತ್ತದೆ ಅಂತ ಹೇಳಿದ್ದಾರೆ. ಆದ್ರೆ ಅಧಿಕಾರಿಗಳ ಸಲಹೆಯನ್ನೂ ಮೀರಿ ರೇವಣ್ಣ ಕ್ಷೇತ್ರಕ್ಕೆ ಅನುದಾನ ಕೊಡುವಂತೆ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.ಯಾವುದೇ ಇಲಾಖೆಗೆ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯ ಅಧಿಕಾರಿಗಳು ಸಾಧಕ-ಬಾದಕಗಳನ್ನು ಚಿಂತಿಸಿ ನಂತರ ಹಣ ಬಿಡುಗಡೆಗೆ ಅನುಮತಿ ನೀಡುತ್ತಾರೆ. ಈ ಮಧ್ಯೆ ಹಾಸನದ ಹೊಳೆನರಸೀಪುರ ಕ್ಷೇತ್ರದಲ್ಲಿ ನೆನೆಗುದಿಗೆ ಬಿದ್ದಿರುವಂತಹ ಯೋಜನೆಗಳನ್ನು ಕ್ಲೀಯರ್ ಮಾಡಿಸಿಕೊಳ್ಳಲು ರೇವಣ್ಣ ಅವರು ಮುಂದಾಗುತ್ತಿದ್ದಾರೆ. ಹೀಗಾಗಿ ಪ್ರತೀ ಯೋಜನೆಗಳಿಗೆ ಹೊಳೆನರಸೀಪುರಕ್ಕೆ ಹಣ ಬಿಡುಗಡೆ ಮಾಡಿದ್ರೆ ಬೇರೆ ಬೇರೆ ಕ್ಷೇತ್ರದವರು ಕೇಳಿದ್ರೆ ಹೇಗೆ?. ಈಗಾಗಲೇ ಕ್ಷೇತ್ರದ ಆರ್ಥಿಕ ಸಂಪನ್ಮೂಲ ಕ್ರೂಢೀಕರಣ ಮಾಡಲು ಹಲವು ಯೋಜನೆಗಳಿಗೆ ಕತ್ತರಿ ಹಾಕುತ್ತಿದ್ದೇವೆ. ಈ ಮಧ್ಯೆ ರೇವಣ್ಣ ಅವರು ತಮ್ಮ ಕ್ಷೇತ್ರಕ್ಕೆ ಅನುದಾನ ನೀಡಲೇಬೇಕು ಅಂತ ಪಟ್ಟು ಹಿಡಿಯುತ್ತಿದ್ದಾರೆ ಅಂತ ಅಧಿಕಾರಿಗಳು ಹೇಳುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictvSign in to your account
Username or Email Address


Password

 Remember Me


