ಬೆಂಗಳೂರು: ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂಗಳು ಮತ್ತು ದಲಿತರೇ ಟಾರ್ಗೆಟ್ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.ನಾಗಮಂಗಲ ಗಲಭೆ ಕೇಸ್‌ನಲ್ಲಿ ಹಿಂದೂ ಯುವಕರ ಮೇಲೆ ಕೇಸ್ ಹಾಕಿರೋ ವಿಚಾರಕ್ಕೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಇವತ್ತು ಮಾತ್ರವಲ್ಲ ಹಿಂದಿನಿಂದಲೂ ಒಂದು ಸಮುದಾಯದ ತುಷ್ಟೀಕರಣ ಮಾಡಿಕೊಂಡು ಬರುತ್ತಿದೆ. ಈ‌ ಸರ್ಕಾರಕ್ಕೆ ಹಿಂದೂಗಳು, ದಲಿತರೇ ಟಾರ್ಗೆಟ್ ಆಗ್ತಿದ್ದಾರೆ. ಯಾದಗಿರಿಯಲ್ಲಿ ಊರಿನಿಂದ ದಲಿತರನ್ನ ಬಹಿಷ್ಕಾರ ಮಾಡಿದ್ದಾರೆ. ರಾಮನಗರದಲ್ಲಿ ಇಂತಹ ಘಟನೆ ಆಗಿದೆ. ಕಾಂಗ್ರೆಸ್‌ಗೆ ತುಷ್ಟೀಕರಣ ರಾಜಕೀಯದ ಭಾಗವಾಗಿದೆ ಅಂತಾ ಕಿಡಿಕಾರಿದರು. ಇದನ್ನೂ ಓದಿ: Nagamangala Violence | ರಾಜ್ಯಪಾಲರು ಮಧ್ಯ ಪ್ರವೇಶ ಮಾಡಲಿ- ರವಿಕುಮಾರ್ ಆಗ್ರಹಜನರು ‌ನೆಮ್ಮದಿಯಿಂದ ಇರಬೇಕು ಅಂತಾ ಕಾಂಗ್ರೆಸ್‌‌ಗೆ ಅನ್ನಿಸೋದಿಲ್ಲ. ಹಿಂದೂ ವಿಚಾರ ಬಂತು ಅಂದರೆ‌ ಸಾಕು ಎತ್ತಿಕಟ್ಟಿ ಧಮನ ಮಾಡೋ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಹೀಗೆ ಕಾಂಗ್ರೆಸ್ ಮಾಡುತ್ತಾ ಹೋದ್ರೆ ಈ ದೇಶದಲ್ಲಿ ನಿರ್ನಾಮ ಆಗುತ್ತೆ‌. ಹಿಂದೂಗಳ ಪರ ಬಿಜೆಪಿ ನಿಲ್ಲುತ್ತದೆ. ಹಿಂದೂಗಳ ರಕ್ಷಣೆಗೆ ಬಿಜೆಪಿ ಇರುತ್ತದೆ. ಕಾಂಗ್ರೆಸ್ ಮಾತು ಕೇಳುವ ಮುಸ್ಲಿಮರು ಹಿಂದೂಗಳನ್ನ ವಿರೋಧ ಮಾಡೋದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.Sign in to your account
Username or Email Address


Password

 Remember Me


